ಹನುಮಸಾಗರ (ಕೊಪ್ಪಳ ಜಿಲ್ಲೆ): ಹನುಮಸಾಗರ, ಹನುಮನಾಳ, ಹೂಲಗೇರಿ ಸೇರಿದಂತೆ ವಿವಿಧ ಕಡೆಗಳಲ್ಲಿ ಭಾನುವಾರ ರಾತ್ರಿ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಸುರಿದ ಅಕಾಲಿಕ ಮಳೆಯಿಂದಾಗಿ ಅಲ್ಲಲ್ಲಿ ಗಿಡ–ಮರಗಳು ಉರುಳಿ ಬಿದ್ದಿವೆ.
ಮಾವಿನ ಫಸಲು ಹಾಳಾಗಿದೆ. ಎಲೆಬಳ್ಳಿ ನೆಲಕ್ಕೆ ಒರಗಿದೆ. ಮನೆಯ ತಗಡುಗಳು ಹಾರಿಹೋಗಿವೆ. ವಿದ್ಯುತ್ ಕಂಬಗಳ ತಂತಿಗಳು ಬಿದ್ದು, ವಿದ್ಯುತ್ ವ್ಯತ್ಯಯ ಉಂಟಾಯಿತು.
ಹನುಮಸಾಗರದಲ್ಲಿ ಸಂತೆ ಬಜಾರ್ ಸೇರಿದಂತೆ ವಿವಿಧ ಕಡೆಗಳಲ್ಲಿ ಮರಗಳು ನೆಲಕ್ಕುರುಳಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.