ಬೆಂಗಳೂರು: ಆ.19ರಂದು ನಿಗದಿಯಾಗಿರುವ ಕಾಮೆಡ್-ಕೆ ಪರೀಕ್ಷೆ ಮುಂದೂಡಲು ಹೈಕೋರ್ಟ್ ನಿರಾಕರಿಸಿದೆ.
ಕೋವಿಡ್ ಕಾರಣದಿಂದ ಪರೀಕ್ಷೆ ಮುಂದೂಡುವಂತೆ ಕೋರಿ ವಕೀಲ ಅಬ್ದುಲ್ ಮನ್ನನ್ ಖಾನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ.ನಾಗರತ್ನ ನೇತೃತ್ವದ ವಿಭಾಗೀಯ ಪೀಠ, ಪ್ರವೇಶ ಪರೀಕ್ಷೆ ವಿಷಯದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿತು.
ಎಸ್ಎಸ್ಎಲ್ಸಿ ಮತ್ತು ಸಿಇಟಿ ಪರೀಕ್ಷೆಗಳು ನಡೆದಿವೆ. ಕಾಮೆಡ್–ಕೆ ಪರೀಕ್ಷೆ ಈಗಾಗಲೇ ವಿಳಂಬವಾಗಿದೆ. ಪರೀಕ್ಷೆ ವೇಳೆ ಎಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಕಾಮೆಡ್–ಕೆಗೆ ಪೀಠ ನಿರ್ದೇಶನ ನೀಡಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.