ADVERTISEMENT

ಎಚ್.ಡಿ.ದೇವೇಗೌಡರ ಹೋರಾಟದ ಚಿತ್ರಗಳು ವೈರಲ್

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2018, 14:20 IST
Last Updated 18 ಅಕ್ಟೋಬರ್ 2018, 14:20 IST
   

ಮಂಡ್ಯ:ಪತ್ರಕರ್ತ ಗಂಗಾಧರಮೂರ್ತಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಎಲ್.ಆರ್.ಶಿವರಾಮೇಗೌಡರ ವಿರುದ್ಧ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೋರಾಟ ನಡೆಸಿದ್ದರು.

ಈಗ ಲೋಕಸಭೆ ಚುನಾವಣೆಯಲ್ಲಿ ಶಿವರಾಮೇಗೌಡರಿಗೆ ಜೆಡಿಎಸ್ ಟಿಕೆಟ್ ಕೊಟ್ಟಿದ್ದಾರೆ.

20 ವರ್ಷಗಳ ಹಿಂದೆ ದೇವೇಗೌಡರು ನಡೆಸಿದ್ದ ಹೋರಾಟದ ಛಾಯಾಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ADVERTISEMENT

ಬಾಯಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು, ಗಂಗಾಧರಮೂರ್ತಿ ಭಾವಚಿತ್ರವನ್ನು ತಲೆಯ ಮೇಲೆ ಹೊತ್ತು ನಾಗಮಂಗಲದಲ್ಲಿ ಪಾದಯಾತ್ರೆ ನಡೆಸಿದ್ದರು.

ದೇವೇಗೌಡರ ಇಬ್ಬಗೆಯ ನೀತಿಯನ್ನು ಖಂಡಿಸಿ, ವಂಗ್ಯವಾಡಿ ಜಾಲತಾಣಗಳಲ್ಲಿ ಸಂದೇಶ ಪ್ರಕಟಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.