ADVERTISEMENT

ಹರದನಹಳ್ಳಿ‌ ದೇವೇಶ್ವರನಿಗೆ‌ ಪೂಜೆ ಸಲ್ಲಿಸಿದಎಚ್ ಡಿ ದೇವೇಗೌಡ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2022, 7:38 IST
Last Updated 14 ನವೆಂಬರ್ 2022, 7:38 IST
   

ಹಾಸನ: ಮುಂದಿನ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ರಾಜ್ಯ ಪ್ರವಾಸ ಮಾಡುವುದಾಗಿ ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡ ತಿಳಿಸಿದರು.

ಕಾರ್ತಿಕ ಸೋಮವಾರ ಹುಟ್ಟೂರಾದ ಹರದನಹಳ್ಳಿಯಲ್ಲಿ ಮನೆದೇವರು ದೇವೇಶ್ವರ (ಈಶ್ವರನಿಗೆ) ವಿಶೇಷ ಪೂಜೆ ನೆರವೇರಿಸಲು ಹಾಸನಕ್ಕೆ ಬಂದಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ಜಿಲ್ಲೆಯಲ್ಲಿ ಮುಂದಿನ ವಾರದಿಂದ ಪ್ರವಾಸ ಆರಂಭಿಸಲಿದ್ದೇನೆ ಎಂದರು.

ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಒಂದೊಂದು ದಿನ ಪ್ರವಾಸ ಮಾಡಲಿದ್ದು, ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಪಕ್ಷ ಮತ್ತಷ್ಟು ಬಲಪಡಿಸುವ ಕುರಿತು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

ಜಿಲ್ಲಾ ಪ್ರವಾಸದ ನಂತರ ರಾಜ್ಯ ಪ್ರವಾಸವನ್ನು ಮಾಡುತ್ತೇನೆ. ರಾಜ್ಯದ ಪ್ರತಿ ಕ್ಷೇತ್ರವನ್ನು ಮರೆಯುವುದಿಲ್ಲ ಎಂದ ಅವರು ಪ್ರವಾಸ ಮುಗಿಸಿದ ಬಳಿಕ ಸಂಸತ್‌ ಅಧಿವೇಶನದಲ್ಲೂ ಪಾಲ್ಗೊಳ್ಳುವುದಾಗಿ ಹೇಳಿದರು.

ಬೆಂಗಳೂರಿನಲ್ಲಿ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಮಂತ್ರಣ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, 'ನಾನು ಈ ವಿಚಾರದಲ್ಲಿ ಏನನ್ನು ಮಾತನಾಡುವುದಿಲ್ಲ. ಯಾರ್ಯಾರು ಏನೇನು ಮಾಡಿದ್ದಾರೆ ಎಂದು ವಿಶ್ಲೇಷಣೆ ಮಾಡಲು ಹೋಗುವುದಿಲ್ಲ' ಎಂದು ಬೇಸರ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.