ADVERTISEMENT

ಇಡಗುಂಜಿ ವಿನಾಯಕ ದೇವಸ್ಥಾನದಲ್ಲಿ ಹರಕೆ ಸಲ್ಲಿಸಿದ ದೇವೇಗೌಡ

​ಪ್ರಜಾವಾಣಿ ವಾರ್ತೆ
Published 25 ಜೂನ್ 2018, 19:38 IST
Last Updated 25 ಜೂನ್ 2018, 19:38 IST
ಹೊನ್ನಾವರ ತಾಲ್ಲೂಕಿನ ಇಡಗುಂಜಿ ವಿನಾಯಕ ದೇವಸ್ಥಾನದಲ್ಲಿ ಸೋಮವಾರ ಪೂಜೆ ಸಲ್ಲಿಸಿ ಹೊರಬಂದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರನ್ನು ಮಾತನಾಡಿಸಲು ಮುಗಿಬಿದ್ದ ಪಕ್ಷದ ಕಾರ್ಯಕರ್ತರು
ಹೊನ್ನಾವರ ತಾಲ್ಲೂಕಿನ ಇಡಗುಂಜಿ ವಿನಾಯಕ ದೇವಸ್ಥಾನದಲ್ಲಿ ಸೋಮವಾರ ಪೂಜೆ ಸಲ್ಲಿಸಿ ಹೊರಬಂದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರನ್ನು ಮಾತನಾಡಿಸಲು ಮುಗಿಬಿದ್ದ ಪಕ್ಷದ ಕಾರ್ಯಕರ್ತರು   

ಹೊನ್ನಾವರ (ಉತ್ತರ ಕನ್ನಡ): ‘ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾದರೆ ಇಡಗುಂಜಿ ವಿನಾಯಕನ ಸನ್ನಿಧಿಗೆ ಬಂದು ಪೂಜೆ ಸಲ್ಲಿಸುವುದಾಗಿ ಹಿಂದೆ ಹರಕೆ ಹೊತ್ತಿದ್ದೆ.ಅದನ್ನು ತೀರಿಸಿದ್ದೇನೆ’ ಎಂದು ಜೆಡಿಎಸ್ ವರಿಷ್ಠ ದೇವೇಗೌಡ ಹೇಳಿದರು.

ದೇವಸ್ಥಾನದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷದ ಗೆಲುವಿಗಾಗಿ ದೇವರಲ್ಲಿ ಪ್ರಾರ್ಥಿಸಿದ್ದೇನೆ. ಅದು ಈಡೇರಿದರೆ ಮತ್ತೊಮ್ಮೆ ದೇವಸ್ಥಾನಕ್ಕೆ ಬಂದು ಪೂಜೆ ಸಲ್ಲಿಸುತ್ತೇನೆ’ಎಂದರು.

ದೇವಸ್ಥಾನದಲ್ಲಿ ನಡೆದ ಗಣಪತಿ ಹವನ, ಮಹಾಮಂಗಳಾರತಿಯಲ್ಲಿ ಪಾಲ್ಗೊಂಡರು. ಬಳಿಕ, ಮಂಗಳಮೂರ್ತಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದಪಕ್ಷದ ಮುಖಂಡ ಗಣಪಯ್ಯ ಗೌಡ ಅವರ ಪುತ್ರನಮದುವೆ ಸಮಾರಂಭದಲ್ಲಿ ಪಾಲ್ಗೊಂಡರು. ಬೆಂಗಳೂರಿಗೆ ತೆರಳುವಮಾರ್ಗಮಧ್ಯೆ ಜೆಡಿಎಸ್ ಪಕ್ಷದಮತ್ತೊಬ್ಬಮುಖಂಡ ಶಂಭು ಗೌಡ ಅವರ ಗುಣವಂತೆಯ ಮನೆಗೆ ಭೇಟಿ ನೀಡಿ ಕಾರ್ಯಕರ್ತರ ಜೊತೆ ಮಾತನಾಡಿದರು.

ADVERTISEMENT

ಪಕ್ಷದ ಮುಖಂಡರಾದ ಪ್ರದೀಪ ನಾಯ್ಕ, ಬಿ.ಆರ್.ನಾಯ್ಕ, ಸುಬ್ರಾಯ ಗೌಡ, ಆನಂದ ಅಸ್ನೋಟಿಕರ, ಜಿ.ಎನ್.ಗೌಡ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.