ADVERTISEMENT

ಆಯುರ್ವೇದ ಚಿಕಿತ್ಸೆಗಾಗಿ ಉಡುಪಿಗೆ ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2019, 20:12 IST
Last Updated 28 ಏಪ್ರಿಲ್ 2019, 20:12 IST
s
s   

ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಯುರ್ವೇದ ಚಿಕಿತ್ಸೆ ಪಡೆಯಲು ಭಾನುವಾರ ರಾತ್ರಿ
ವಿಶೇಷ ವಿಮಾನದಲ್ಲಿ ಉಡುಪಿಗೆ ತೆರಳಿದರು.

ಉಡುಪಿ ಸಮೀಪದ ಕಾಪುವಿನಲ್ಲಿರುವ ಆಯುರ್ವೇದ ಚಿಕಿತ್ಸಾಲಯವೊಂದರಲ್ಲಿ ಅವರು ಚಿಕಿತ್ಸೆ ಪಡೆಯಲಿದ್ದಾರೆ. ಲೋಕಸಭಾ ಚುನಾವಣೆ ಮುಗಿದ ತಕ್ಷಣವೇ ಅವರು ಇದೇ ಚಿಕಿತ್ಸಾ ಕೇಂದ್ರಕ್ಕೆ ಹೋಗಿದ್ದರು.

ಆ ಸಂದರ್ಭದಲ್ಲಿ ಶ್ರೀಲಂಕಾದಲ್ಲಿ ಬಾಂಬ್‌ ಸ್ಫೋಟದಿಂದಾಗಿ ಜೆಡಿಎಸ್‌ ಕಾರ್ಯಕರ್ತರು ಮೃತಪಟ್ಟಿದ್ದರಿಂದ ಬೇಸರಗೊಂಡು ಚಿಕಿತ್ಸೆ ಪೂರ್ಣಗೊಳಿಸದೇ ಹಿಂದಕ್ಕೆ ಬಂದಿದ್ದರು. ಈಗ ಚಿಕಿತ್ಸೆ ಮುಂದುವರಿಸಲು ವಾಪಸ್ ತೆರಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.