ADVERTISEMENT

ಸಿ.ಎಂ. ಇಬ್ರಾಹಿಂ ಭೇಟಿಯಾದ ಎಚ್‌ಡಿಕೆ

ಮರಳಿ ಜೆಡಿಎಸ್‌ಗೆ ಕರೆತರಲು ಪ್ರಯತ್ನ ಆರಂಭ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2020, 19:31 IST
Last Updated 8 ಡಿಸೆಂಬರ್ 2020, 19:31 IST
ಸಿ.ಎಂ. ಇಬ್ರಾಹಿಂ
ಸಿ.ಎಂ. ಇಬ್ರಾಹಿಂ   

ಬೆಂಗಳೂರು: ವಿಧಾನ ಪರಿಷತ್‌ನ ಕಾಂಗ್ರೆಸ್ ಸದಸ್ಯ ಸಿ.ಎಂ. ಇಬ್ರಾಹಿಂ ಅವರ ಮನೆಗೆ ಸೋಮವಾರ ದಿಢೀರ್‌ ಭೇಟಿ ನೀಡಿರುವ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ.

ಜನತಾ ದಳದಲ್ಲಿ ಸಕ್ರಿಯರಾಗಿದ್ದ ಇಬ್ರಾಹಿಂ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಿಕಟವರ್ತಿಗಳಲ್ಲಿ ಪ್ರಮುಖರು. ಸಿದ್ದರಾಮಯ್ಯ ಅವರೊಂದಿಗೆ ಕಾಂಗ್ರೆಸ್‌ ಸೇರಿದ್ದರು.

ಇಬ್ರಾಹಿಂ ಅವರು ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ನ ಪ್ರಮುಖ ನಾಯಕರಿಂದ ಕೆಲವು ದಿನಗಳಿಂದ ಅಂತರ ಕಾಯ್ದುಕೊಂಡಿದ್ದಾರೆ. ಫ್ರೇಜರ್‌ ಟೌನ್‌ನಲ್ಲಿರುವ ಅವರ ಮನೆಗೆ ಸೋಮವಾರ ಬೆಳಿಗ್ಗೆ ಭೇಟಿನೀಡಿದ ಕುಮಾರಸ್ವಾಮಿ, ಒಂದು ಗಂಟೆಗೂ ಹೆಚ್ಚು ಕಾಲ ಸಮಾಲೋಚನೆ ನಡೆಸಿದ್ದಾರೆ.

ADVERTISEMENT

ಕಾಂಗ್ರೆಸ್‌ ನಾಯಕರೊಂದಿಗೆ ಮುನಿಸಿಕೊಂಡಿರುವ ಇಬ್ರಾಹಿಂ ಅವರನ್ನು ಮತ್ತೆ ಜೆಡಿಎಸ್‌ಗೆ ಕರೆತರಲು ಕುಮಾರಸ್ವಾಮಿ ಪ್ರಯತ್ನ ಆರಂಭಿಸಿದ್ದಾರೆ. ಪಕ್ಷಕ್ಕೆ ಮರಳಿದರೆ ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷರ ಹುದ್ದೆ ನೀಡುವುದಾಗಿ ಇಬ್ರಾಹಿಂ ಅವರಿಗೆ ಆಹ್ವಾನ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.