ADVERTISEMENT

ಅತಿಥಿ ಉಪನ್ಯಾಸಕರ ನೆರವಿಗೆ ಬರುವಂತೆ ಸರ್ಕಾರಕ್ಕೆ ಎಚ್.ಡಿ. ಕುಮಾರಸ್ವಾಮಿ ಒತ್ತಾಯ

​ಪ್ರಜಾವಾಣಿ ವಾರ್ತೆ
Published 30 ಜೂನ್ 2020, 8:02 IST
Last Updated 30 ಜೂನ್ 2020, 8:02 IST
ಎಚ್.ಡಿ. ಕುಮಾರಸ್ವಾಮಿ
ಎಚ್.ಡಿ. ಕುಮಾರಸ್ವಾಮಿ   

ಬೆಂಗಳೂರು: ಕೊರೊನಾ ವೈರಸ್ ಸೋಂಕಿನ ವೇಳೆ ಸಂಕಷ್ಟಕ್ಕೆ ಸಿಲುಕಿರುವ ಪದವಿ ಕಾಲೇಜುಗಳಲ್ಲಿನ ಅತಿಥಿ ಉಪನ್ಯಾಸಕರ ನೆರವಿಗೆ ರಾಜ್ಯ ಸರ್ಕಾರ ಕೂಡಲೇ ಧಾವಿಸಬೇಕು ಎಂದುಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು,ಕೊರೊನಾ ವೈರಸ್ ಸೋಂಕಿನ ವೇಳೆ ಸಂಕಷ್ಟಕ್ಕೆ ಸಿಲುಕಿರುವ ಪದವಿ ಕಾಲೇಜುಗಳಲ್ಲಿನ ಅತಿಥಿ ಉಪನ್ಯಾಸಕರಿಗೆಸರ್ಕಾರ ಮೂರು ತಿಂಗಳ ವೇತನ ನೀಡುವ ಮೂಲಕ ಮಾನವೀಯ ನೆಲೆಗಟ್ಟಿನಲ್ಲಿ ತುರ್ತು ನೆರವಿಗೆ ಧಾವಿಸಬೇಕು ಎಂದು ಮಾಜಿ

ಅತಂತ್ರರಾಗಿರುವ ಅತಿಥಿ ಉಪನ್ಯಾಸಕರು ಹತಾಶೆಗೊಂಡು ಸುಮಾರು ಎಂಟು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ದುರದೃಷ್ಟಕರ. ಸರ್ಕಾರ ಅತಿಥಿ ಉಪನ್ಯಾಸಕರಿಗೆ ತಕ್ಷಣವೇ ಸ್ಪಂದಿಸಬೇಕು ಎಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.