ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ, ಚಕ್ರವರ್ತಿ ಸೂಲಿಬೆಲೆ ಮಹಾನ್ ದೇಶಭಕ್ತರೇನಲ್ಲ. ಬೆಂಗಳೂರಿಗೆ ಅವರ ಕೊಡುಗೆಯಾದರೂ ಏನು? ಅವರ ಹತ್ಯೆಗೆ ಸಂಚು ನಡೆಸಿದವರಿಗೆ ಶಿಕ್ಷೆ ಆಗಲಿ, ಆದರೆ ಅದೇ ನೆಪದಲ್ಲಿ ಒಂದು ಸಮುದಾಯದ ಬಗ್ಗೆ ದೂರುವುದು ಬೇಡ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
‘ದೇಶದಲ್ಲಿ ಬಿಜೆಪಿ ಸಾಕಷ್ಟು ತಪ್ಪು ನಿರ್ಧಾರ ಕೈಗೊಂಡಿದೆ. ಮಂಗಳೂರು ಘಟನೆ ಸಂಬಂಧ ವಿಡಿಯೊ ಬಿಡುಗಡೆ ಮಾಡಿದ್ದೇನೆ.ಸದನದಲ್ಲಿ ನಾನು ಈ ಬಗ್ಗೆ ಹೋರಾಟ ಮಾಡುತ್ತೇನೆ.ಮೂವರು ಅಧಿಕಾರಿಗಳನ್ನು ಅಮಾನತು ಮಾಡಬೇಕು, ಇಲ್ಲವಾದರೆ ಸದನ ನಡೆಯಲು ಬಿಡುವುದಿಲ್ಲ’ ಎಂದು ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ:ಹಿಂದೂ ಮುಖಂಡರ ಹತ್ಯೆ ಯತ್ನ: ಎಸ್ಡಿಪಿಐನಿಂದ ₹ 10 ಸಾವಿರ ಸಂಬಳ!
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.