ADVERTISEMENT

ಬೆಳ್ಳಿ ಪದಕ ವಿಜೇತ ಕರ್ನಾಟಕ ವನಿತೆಯರ ತಂಡಕ್ಕೆ ಸಿಎಂ ಕುಮಾರಸ್ವಾಮಿ ಅಭಿನಂದನೆ

ಟಗ್‌ ಆಫ್‌ ವಾರ್‌ ಕ್ರೀಡಾಕೂಟ

​ಪ್ರಜಾವಾಣಿ ವಾರ್ತೆ
Published 4 ಜೂನ್ 2019, 12:39 IST
Last Updated 4 ಜೂನ್ 2019, 12:39 IST
   

ಬೆಂಗಳೂರು: ನೇಪಾಳದ ಕಠ್ಮಂಡುವಿನಲ್ಲಿ ನಡೆದ ರಾಷ್ಟ್ರೀಯ ಟಗ್ ಆಫ್ ವಾರ್ ಕ್ರೀಡಾಕೂಟದಲ್ಲಿ (480 kg ವಿಭಾಗದಲ್ಲಿ) ಬೆಳ್ಳಿ ಪದಕ ಪಡೆದು ಸಾಧನೆ ಮಾಡಿದ ಕರ್ನಾಟಕ ವನಿತೆಯರ ತಂಡದ ಕ್ರೀಡಾಪಟುಗಳನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ವಿಧಾನಸೌಧದಲ್ಲಿ ಅಭಿನಂದಿಸಿದರು.

ವಿದ್ಯಾರ್ಥಿನಿಯರು ಈ ಸಾಧನೆ ಮಾಡಿರುವುದು ನಾಡಿಗೆ ಹೆಮ್ಮೆಯ ಸಂಗತಿ ಎಂದು ಅವರು ಪ್ರಶಂಸೆ ವ್ಯಕ್ತಪಡಿಸಿದರು.

ಎಂಟು ಜನರ ತಂಡದಲ್ಲಿ ಬೆಂಗಳೂರು ಜೈನ್ ಕಾಲೇಜಿನ ವಿದ್ಯಾರ್ಥಿನಿ ಭೂಮಿಕಾ ಎಸ್ ತಗಡೂರು, ಭಾಗ್ಯಲಕ್ಷ್ಮಿ ಬಾಲಾಜಿ, ಹಾಸನದ ಇಂಚರ, ಸರೇನಾ ಅನೀಸ್, ಗುಣರ್ಪಿತ, ಜಯಶ್ರೀ, ಬಿ.ಜಿ.ಆಶಾ, ಮರಿಯಾ ಜನೀಫರ್, ದೀಕ್ಷಾ ಭಾಗವಹಿಸಿದ್ದರು. ರೋಹಿತ್ ಅವರು ವನಿತೆಯರ ತಂಡಕ್ಕೆ ತರಬೇತಿ ನೀಡಿದ್ದರು.

ADVERTISEMENT

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಜಯಮಾಲಾ, ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಅವರು ಕ್ರೀಡಾಪಟುಗಳನ್ನು ಅಭಿನಂದಿಸಿದರು. ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಎಚ್.ಬಿ.ದಿನೇಶ್ ಹಾಜರಿದ್ದರು.

ನೇಪಾಳದಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ನಾಡಿಗೆ ಹೆಮ್ಮೆ ತಂದಿರುವ ವನಿತೆಯರ ತಂಡವನ್ನು ದೇಶ ಮತ್ತು ರಾಜ್ಯದ ಟಗ್ ಆಫ್ ವಾರ್ ಸಂಸ್ಥೆಗಳು ಅಭಿನಂದಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.