ADVERTISEMENT

ಕುಮಾರಸ್ವಾಮಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಪ್ರಹ್ಲಾದ ಜೋಶಿ

​ಪ್ರಜಾವಾಣಿ ವಾರ್ತೆ
Published 27 ಜೂನ್ 2019, 5:48 IST
Last Updated 27 ಜೂನ್ 2019, 5:48 IST
ಚಿತ್ರ ಕೃಪೆ: ಎಎನ್‌ಐ
ಚಿತ್ರ ಕೃಪೆ: ಎಎನ್‌ಐ   

ನವದೆಹಲಿ:ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ ಜೋಶಿ ಟೀಕಿಸಿದರು.

‘ಚುನಾವಣೆಯಲ್ಲಿ ಮೋದಿಗೆ ವೋಟು ಹಾಕ್ತೀರಿ, ಸಮಸ್ಯೆ ಪರಿಹಾರಕ್ಕೆ ನಮ್ಮ ಹತ್ರ ಬರುತ್ತೀರಾ’ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಜೋಶಿ ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

ಸಂಸತ್‌ನ ಹೊರಭಾಗದಲ್ಲಿ ಮಾತನಾಡಿದ ಅವರು ‘ಮುಖ್ಯಮಂತ್ರಿಯಾಗಲು ಜನರು ಅವರಿಗೆ (ಕುಮಾರಸ್ವಾಮಿ) ಮತ ಚಲಾಯಿಸಿಲ್ಲ. ಮತ್ಯಾಕೆ ಅವರು ಮುಖ್ಯಮಂತ್ರಿಯಾಗಿದ್ದಾರೆ? ಕಾಂಗ್ರೆಸ್ ಜತೆಗಿನ ಅಪವಿತ್ರ ಮೈತ್ರಿಯಿಂದ ಅವರು ಮುಖ್ಯಮಂತ್ರಿಯಾಗಿದ್ದಾರೆ. ಚುನಾವಣೆಯಲ್ಲಿ ಮಗನ ಸೋಲಿನಿಂದಾಗಿ ಕುಮಾರಸ್ವಾಮಿ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.