ADVERTISEMENT

ಕುತೂಹಲ ಕೆರಳಿಸಿದ ಕುಮಾರಸ್ವಾಮಿ –ರಾಮಲಿಂಗಾರೆಡ್ಡಿ ಹಠಾತ್ ಭೇಟಿ 

​ಪ್ರಜಾವಾಣಿ ವಾರ್ತೆ
Published 25 ಜುಲೈ 2019, 7:09 IST
Last Updated 25 ಜುಲೈ 2019, 7:09 IST
   

ಬೆಂಗಳೂರು: ನಿರ್ಗಮಿತ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್‌ ಹಿರಿಯ ಮುಖಂಡ, ಶಾಸಕ ರಾಮಲಿಂಗಾರೆಡ್ಡಿ ಅವರ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.

ನಗರದ ಲಕ್ಕಸಂದ್ರದಲ್ಲಿರುವ ರಾಮಲಿಂಗಾರೆಡ್ಡಿ ಅವರ ಮನೆಯಲ್ಲಿಕುಮಾರಸ್ವಾಮಿ ಉಪಾಹಾರ ಸೇವಿಸಿದ್ದರು.

ಇದೇ ವೇಳೆ ಶಾಸಕಿ ಸೌಮ್ಯಾರೆಡ್ಡಿ ಅವರೂ ಇದ್ದರು. ಸದ್ಯದ ರಾಜಕೀಯ ವಿಧ್ಯಮಾನಗಳ ಕುರಿತು ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ADVERTISEMENT

‘ಸುಭದ್ರ ಸರ್ಕಾರ ನೀಡಲು ಸಾಧ್ಯವಿಲ್ಲ’
ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಯಾರೂ ಕೂಡ (ಬಿಜೆಪಿ) ಸುಭದ್ರ ಸರ್ಕಾರ ನೀಡಲು ಸಾಧ್ಯವಿಲ್ಲ ಎಂದು ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ರಾಮಲಿಂಗಾರೆಡ್ಡಿಯವರು ಸರ್ಕಾರವನ್ನು ಬೆಂಬಲಿಸಿ ರಾಜೀನಾಮೆ ಹಿಂಪಡೆದಿದ್ದರು. ಸದನದಲ್ಲಿ ವಿಶ್ವಾಸಮತ ಯಾಚನೆ ವೇಳೆ ಅವರ ಬದ್ಧತೆ ಕುರಿತು ಮಾತನಾಡಲು ಸಾಧ್ಯವಾಗಲಿಲ್ಲ. ಆದ್ದರಿಂದ ಇಂದು ಅವರ ಮನೆಗೆ ಭೇಟಿ ನೀಡಿ ಉಪಾಹಾರ ಸೇವಿಸಿದ್ದೇನೆ ಎಂದು ಹೇಳಿದರು.

‘ರಾಜೀನಾಮೆ ಅಂತರೀಕ ವಿಚಾರ’
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಪಕ್ಷದ ಅಂತರಿಕ ವಿಚಾರವಾಗಿತ್ತು ಎಂದು ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದರು.

‘ಪ್ರಜಾವಾಣಿ’ ಸುದ್ದಿ, ಬರಹಗಳಲ್ಲಿ ರಾಜಕೀಯ ಬೆಳವಣಿಗೆಗಳ ಸಮಗ್ರ ನೋಟ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.