ADVERTISEMENT

ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬದವರ ಭೇಟಿಯಾದ ಸಿಎಂ: ₹ 5 ಲಕ್ಷ ಪರಿಹಾರ

ಶವಸಂಸ್ಕಾರಕ್ಕೆ ಸಿಎಂ ಆಹ್ವಾನಿಸಿ ವಿಡಿಯೊ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದ ರೈತ

​ಪ್ರಜಾವಾಣಿ ವಾರ್ತೆ
Published 18 ಜೂನ್ 2019, 6:28 IST
Last Updated 18 ಜೂನ್ 2019, 6:28 IST
   

ಮಂಡ್ಯ: ಕೆ.ಆರ್‌.ಪೇಟೆ ತಾಲ್ಲೂಕು, ಸಂತೇಬಾಚಹಳ್ಳಿ ಹೋಬಳಿ ಅಘಲಯ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ರೈತ ಎ.ಎನ್‌.ಸುರೇಶ್‌ ಅವರ ಕುಟುಂಬದವರನ್ನು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮಂಗಳವಾರ ಭೇಟಿಯಾದರು.

ಕುಟುಂಬದವರಿಗೆ ಸಾಂತ್ವ ಹೇಳಿದ ಕುಮಾರಸ್ವಾಮಿ ಅವರು, ₹ 5 ಲಕ್ಷ ಪರಿಹಾರ ಧನದ ಚೆಕ್ ವಿತರಿಸಿದರು.

‘ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ನನ್ನ ಶವಸಂಸ್ಕಾರಕ್ಕೆ ಬರಬೇಕು, ನಮ್ಮ ಹೋಬಳಿ ವ್ಯಾಪ್ತಿಯ ಕೆರೆ ತುಂಬಿಸಬೇಕು’ ಎಂದು ಮನವಿ ಮಾಡುವ ವಿಡಿಯೊ ಚಿತ್ರೀಕರಿಸಿ ಸುರೇಶ್‌ ತನ್ನ ಜಮೀನಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಸೋಮವಾರ ಎರಡು ವಿಡಿಯೊ ದೊರೆತಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.