ಬೆಂಗಳೂರು: ಇದೇ 14ರಂದು ರಾಜ್ಯ ಸರ್ಕಾರದ ವತಿಯಿಂದ ‘ಹಿಂದಿ ದಿವಸ’ ಆಚರಣೆ ಮಾಡದಂತೆ ಆಗ್ರಹಿಸಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸೋಮವಾರ ಪತ್ರ ಬರೆದಿದ್ದಾರೆ.
‘ಒಕ್ಕೂಟ ವ್ಯವಸ್ಥೆಯಲ್ಲಿ ಒಂದು ಭಾಷೆಯನ್ನು ಮಾತ್ರವೇ ಮೆರೆಸುವುದು ಜನತೆಗೆ ಮಾಡುವ ಪರಮ ಅನ್ಯಾಯ. ‘ಹಿಂದಿ ದಿವಸ’ವನ್ನು ಕರ್ನಾಟಕ ಸರ್ಕಾರವು ಒತ್ತಾಯಪೂರ್ವಕವಾಗಿ ಆಚರಿಸುವುದು ಕನ್ನಡಿಗರಿಗೆ ಮಾಡುವ ಅವಮಾನ’ ಎಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.