ADVERTISEMENT

ಬಿಎಸ್‌ವೈ ದೆಹಲಿಗೆ ಹೋಗಿದ್ದು ಅನರ್ಹರ ರಕ್ಷಣೆಗೆ, ಪರಿಹಾರಕ್ಕಾಗಿ ಅಲ್ಲ: ಎಚ್‌ಡಿಕೆ

‘ರಾಜಕೀಯ ನಾಟಕ’

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2019, 6:54 IST
Last Updated 22 ಸೆಪ್ಟೆಂಬರ್ 2019, 6:54 IST
ಎಚ್‌.ಡಿ.ಕುಮಾರಸ್ವಾಮಿ
ಎಚ್‌.ಡಿ.ಕುಮಾರಸ್ವಾಮಿ   

ಬೆಂಗಳೂರು:‘ಮುಖ್ಯಮಂತ್ರಿಬಿ.ಎಸ್. ಯಡಿಯೂರಪ್ಪನವರು ನೆರೆ ಪರಿಹಾರ ತರುವುದಕ್ಕೆಂದು ದೆಹಲಿಗೆ ಹೋಗಿಲ್ಲ. ಬದಲಿಗೆ ಅನರ್ಹ ಶಾಸಕರ ರಕ್ಷಣೆಗೆ ಕೇಂದ್ರ ಗೃಹ ಸಚಿವಅಮಿತ್ ಶಾ ಅವರ ಪ್ರಭಾವ ಬಳಸಿಕೊಳ್ಳಲು ಹೋಗಿದ್ದಾರೆ’ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ಶಾಸಕ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಅಮಿತ್ ಶಾ ಅವರನ್ನು ಭಾನುವಾರ ಬೆಳಿಗ್ಗೆ ಭೇಟಿ ಮಾಡಿದ ಯಡಿಯೂರಪ್ಪ, ಪ್ರವಾಹ ಪರಿಹಾರ ಕುರಿತು ಚರ್ಚಿಸಿದ್ದಾಗಿ ಬಳಿಕ ತಿಳಿಸಿದ್ದಾರೆ.

ಇದಕ್ಕೆ ಪ್ರತಿಯಾಗಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ‘ಆಪರೇಷನ್ ಕಮಲದ ಸಂತ್ರಸ್ತರ ರಕ್ಷಣೆಗಾಗಿ ದೆಹಲಿಗೆ ಹೋಗಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ನೆರೆ ಸಂತ್ರಸ್ತರ ಪರಿಹಾರ ಧನ ಸಹಾಯ ಕೋರಲು ದೆಹಲಿಗೆ ತರಳಿದ್ದೇನೆ ಎಂದಿರುವುದು ಒಂದು ‘ರಾಜಕೀಯ ನಾಟಕ’. ಅಮಿತ್ ಶಾ ಅವರ ಪ್ರಭಾವ ಬಳಸಿ ಪ್ರಜಾಪ್ರಭುತ್ವ ವಿರೋಧಿ ಆಪರೇಷನ್ ಕಮಲದ ಸಂತ್ರಸ್ತ ಅನರ್ಹರನ್ನು ಬಚಾವ್ ಮಾಡಿಸಲಷ್ಟೇ ಅವರು ದೆಹಲಿಗೆ ಹೋಗಿದ್ದಾರೆ’ ಎಂದು ಟೀಕಿಸಿದ್ದಾರೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.