ಬೆಂಗಳೂರು: ರಾಜ್ಯದಲ್ಲಿ ರಾಜಕೀಯ ಗೊಂದಲಗಳ ಮಧ್ಯೆಯೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬುಧವಾರ ಜನತಾ ದರ್ಶನ ನಡೆಸಿದರು. ಜತೆಗೆ ಬಜೆಟ್ ಸಿದ್ಧತಾ ಸಭೆಗಳನ್ನು ನಡೆಸಿದರು.
ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ ನಡೆಸಿದ ಅವರು, ವೈದ್ಯಕೀಯ ನೆರವಿಗಾಗಿ ಮನವಿ ಸಲ್ಲಿಸಿದ ಆರು ಮಂದಿಗೆ ಸ್ಥಳದಲ್ಲೇ ನೆರವು ನೀಡಿದರು. ವಿವಿಧ ಸಂಘ ಸಂಸ್ಥೆಗಳಿಂದ ಮನವಿ ಸ್ವೀಕರಿಸಿ ಸೂಕ್ತ ಕ್ರಮದ ಭರವಸೆ ನೀಡಿದರು.
ಬಳಿಕ ಕಾರ್ಮಿಕ ಇಲಾಖೆಗೆ ಸಂಬಂಧಿಸಿದಂತೆ ಬಜೆಟ್ ಪೂರ್ವಭಾವಿ ಚರ್ಚೆ ನಡೆಸಿದರು. ಉಪಮುಖ್ಯಮಂತ್ರಿ ಜಿ.ಪರಮೇಶ್ವರ, ಕಾರ್ಮಿಕ ಸಚಿವ ವೆಂಕಟರಮಣಪ್ಪ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಇದ್ದರು. ಕುಮಾರಸ್ವಾಮಿ ಅವರು ಇದೇ 28ರ ವರೆಗೆ ಬಜೆಟ್ ಪೂರ್ವಸಿದ್ಧತಾ ಸಭೆಗಳನ್ನು ನಡೆಸಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.