ಬೆಂಗಳೂರು:‘ಶಾಸಕ ಜಿ.ಟಿ ದೇವೇಗೌಡರು ಪಕ್ಷದಿಂದಏನೂ ಮಾಡಿಕೊಂಡಿಲ್ಲವಾ? ನನ್ನಿಂದ ಸ್ವಲ್ಪವೂ ಅವರಿಗೆ ಅನುಕೂಲ ಆಗಿಲ್ಲವಾ?’ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.
‘ನಾನು ಅವರಿಗಾಗಿ ಕೆಲಸ ಮಾಡು ತ್ತೇನೆ, ಎಲ್ಲಅಧಿಕಾರವವನ್ನು ಅವರೇ ಪಡೆದುಕೊಳ್ಳಲಿ, ಆದರೆ ಯಾರು ಯಾವಾಗ ಪಕ್ಷ ಬಿಟ್ಟು ಹೋಗುತ್ತಾರೆ ಎಂಬುದನ್ನು ಹೇಳುವುದಕ್ಕೆ ಆಗುತ್ತ ದೆಯೇ’ ಎಂದು ಅವರು ಬುಧವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನೂತನ ಶಾಸಕರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರ ಬಗ್ಗೆ ಪ್ರಸ್ತಾಪಿಸಿ, ‘ನೀವೇ ನಮ್ಮ ಗುರುಗಳು ಅಂತ ಹೇಳುತ್ತಾರೆ,ಅವರೇ ಇವರಿಗೆ ಟೋಪಿ ಹಾಕಿ ಹೋಗಿದ್ದು ಗೊತ್ತಿಲ್ಲವೇ?’ ಎಂದು ಚುಚ್ಚಿದರು.
ಪಕ್ಷ ತೊರೆಯುವುದಿಲ್ಲ: ‘ಯಾವ ಶಾಸಕರೂ ಪಕ್ಷತೊರೆಯುವುದಿಲ್ಲ. ನನ್ನ ಷಷ್ಠ್ಯಬ್ದಪೂರ್ತಿ ಸಮಾರಂಭಕ್ಕೆ ಜಿ.ಟಿ. ದೇವೇಗೌಡರನ್ನು ಬಿಟ್ಟು ಎಲ್ಲರೂ ಬಂದು ಊಟ ಮಾಡಿ ಹೋಗಿದ್ದಾರೆ’ ಎಂದರು.
‘ಬಿಜೆಪಿ ಸರ್ಕಾರ ಸ್ಥಿರವಾಗಿರಲಿ ಎಂದು ನಾನೂ ಆಸೆಪಡು ತ್ತೇನೆ. ಸರ್ಕಾರಕ್ಕೆನಾನಂತೂ ತೊಂದರೆ ಕೊಡುವುದಿಲ್ಲ. ನಾನು ಯಾವ ಶಾಸಕರನ್ನು ಖರೀದಿ ಮಾಡು ವುದಿಲ್ಲ.ಬಿಜೆಪಿಯ ಸಂಸ್ಕೃತಿಯೇ ಆಪರೇಷನ್ ಮಾಡುವಂತದ್ದು,ಅವರು ಮಾಡಲಿ’ ಎಂದು ಕುಮಾರಸ್ವಾಮಿ ಕುಟುಕಿದರು.
‘ಚುನಾವಣೆಯಲ್ಲಿ ಸೋಲು ಗೆಲುವು ಸಹಜ,ಉಪಚುನಾವಣೆಯಲ್ಲಿ ಆಡಳಿತ ಪಕ್ಷ ಗೆಲುವು ಸಾಧಿಸುವುದು ಸತ್ಯ. ಕಳೆದ ಬಾರಿ ಗುಂಡ್ಲುಪೇಟೆ, ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿತ್ತು.ಬಳಿಕ ಬಂದ ಸಾರ್ವತ್ರಿಕ ಚುನಾವಣೆಯಲ್ಲಿ ಎರಡೂ ಕಡೆ ಸೋತರು. ಕೆ.ಆರ್.ಪೇಟೆಯಲ್ಲಿ ಈ ಹಿಂದೆ ಕಾಂಗ್ರೆಸ್ನವರು ಗೆದ್ದಿದ್ದರು.ಜನ ಸುಭದ್ರ ಸರ್ಕಾರ ಬಯಸಿ ಮತ ಚಲಾಯಿಸಿದ್ದಾರೆ.ಸುಭದ್ರ ಸರ್ಕಾರ ನಡೆಸುವವರು ಜನರಿಗಾಗಿ ಒಳ್ಳೆಯ ಕೆಲಸ ಮಾಡಲಿ’ ಎಂದರು.
ತಲೆ ಕೆಡಿಸಿಕೊಳ್ಳುವುದಿಲ್ಲ: ‘ಇಂದಿರಾ ಕ್ಯಾಂಟೀನ್ಗೆ ಏನಾದರೂ ಹೆಸರು ಇಡಲಿ, ಅದರ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ’ ಎಂದು ಕುಮಾರಸ್ವಾಮಿ ಪ್ರತಿಕ್ರಿಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.