ADVERTISEMENT

Video | ಆಲ್ಕೋಹಾಲಾದರೇನು? ಹಾಲಾದರೇನು?: ಹಾಲಿನ ದರ ಏರಿಕೆಗೆ ಕುಮಾರಸ್ವಾಮಿ ಟೀಕೆ

ಪ್ರಜಾವಾಣಿ ವಿಶೇಷ
Published 22 ಜುಲೈ 2023, 14:40 IST
Last Updated 22 ಜುಲೈ 2023, 14:40 IST

ಪ್ರತಿ ಲೀಟರ್‌ ನಂದಿನಿ ಹಾಲಿನ ದರವನ್ನು ಆಗಸ್ಟ್‌ 1ರಿಂದ ₹ 3 ಹೆಚ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿರುವುದನ್ನು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಖಂಡಿಸಿದ್ದಾರೆ. ಸರ್ಕಾರ ಒಂದು ಕೈಯಲ್ಲಿ ಕೊಟ್ಟು, ಇನ್ನೊಂದು ಕೈಯಲ್ಲಿ ಕಸಿದುಕೊಳ್ಳುತ್ತಿದೆ. ಅನ್ನಭಾಗ್ಯದ ಹಣವನ್ನು ಹಾಲು, ಆಲ್ಕೋಹಾಲಿನಿಂದಲೇ ವಸೂಲಿಗೆ ಇಳಿದಿರುವ ಕಾಂಗ್ರೆಸ್ ಕ್ಷುದ್ರ ವಿತ್ತ ನೀತಿಗೆ ಧಿಕ್ಕಾರ ಎಂದು ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.