ಬೆಂಗಳೂರು: ‘ಸಾಮ್ರಾಟ್ ಅಶೋಕೂ, ನಿಮ್ಮ ಪಕ್ಷದಲ್ಲಿರುವ ಅರುಣರಾಗ, ವಿಜಯನಾದ ಕಥನಗಳ ಕಥೆ ಏನು’ ಎಂದು ಕಂದಾಯ ಸಚಿವ ಆರ್. ಅಶೋಕ ಅವರನ್ನು ಉದ್ದೇಶಿಸಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
‘ಮುಂದಿನ ಚುನಾವಣೆಯಲ್ಲಿ ಜೆಡಿಎಸ್ 20 ಕ್ಷೇತ್ರಗಳಲ್ಲಿ ಮಾತ್ರ ಗೆಲ್ಲುತ್ತದೆ’ ಎಂಬ ಆರ್. ಅಶೋಕ ಹೇಳಿಕೆಗೆ ಸರಣಿ ಟ್ವೀಟ್ ಮೂಲಕ ತಿರುಗೇಟು ನೀಡಿರುವ ಕುಮಾರಸ್ವಾಮಿ, ‘ಅಶೋಕ ಅವರು ಭವಿಷ್ಯವನ್ನು, ಸಂಖ್ಯಾಶಾಸ್ತ್ರವನ್ನು ಹೇಳುತ್ತಾರೆ ಎಂದು ನನಗೆ ಗೊತ್ತಾಗಿದ್ದು ಈಗಲೇ. ಅವರಲ್ಲೂ ಒಬ್ಬರು ‘ಕಾಲಜ್ಞಾನಿ’, ‘ಸಂಖ್ಯಾಜ್ಞಾನಿ’ ಇದ್ದಾರೆ ಎನ್ನುವ ಸೋಜಿಗ ನನಗೆ ಬೆರಗುಂಟು ಮಾಡಿದೆ’ ಎಂದು ವ್ಯಂಗ್ಯವಾಡಿದ್ದಾರೆ.
‘ಜೆಡಿಎಸ್ಗೆ 20 ಸ್ಥಾನಗಳು ಬರುತ್ತವೆ ಎಂದು ಗಿಣಿ ಭವಿಷ್ಯ ಹೇಳಿರುವ ಅವರು, ತಮ್ಮ ಬಿಜೆಪಿಗೆ ಅದೆಷ್ಟು ಸೀಟು ಗೆಲ್ಲುತ್ತದೆ ಎನ್ನುವುದನ್ನು ಹೇಳಲು ಮರೆತಿದ್ದಾರೆ’ ಎಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.