ADVERTISEMENT

ಮನೆಕೆಲಸದ ಮಹಿಳೆಯ ಘನತೆಗೆ ಚ್ಯುತಿ ಪ್ರಕರಣ: ಎಚ್.ಡಿ.ರೇವಣ್ಣ ನಿರಾಳ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2025, 15:42 IST
Last Updated 29 ಡಿಸೆಂಬರ್ 2025, 15:42 IST
   

ಬೆಂಗಳೂರು: ಮನೆಕೆಲಸದ ಮಹಿಳೆಯ ಘನತೆಗೆ ಚ್ಯುತಿ ಉಂಟು ಮಾಡಿದ ಆರೋಪ ಎದುರಿಸುತ್ತಿದ್ದ ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್‌ ಶಾಸಕ ಎಚ್‌.ಡಿ. ರೇವಣ್ಣ ವಿರುದ್ಧದ ಕ್ರಿಮಿನಲ್ ಪ್ರಕರಣದ ಅಪರಾಧ ಪರಿಗಣಿಸಲು ಜನಪ್ರತಿನಿಧಿಗಳ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನಿರಾಕರಿಸಿದೆ.

ಈ ಸಂಬಂಧ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ, ಭಾರತೀಯ ದಂಡ ಸಂಹಿತೆ-1860ರ ಕಲಂ 354–ಎ (ಲೈಂಗಿಕ ಸಮ್ಮತಿಗಾಗಿ ಒತ್ತಾಯ ಅಥವಾ ಮನವಿ) ಅಡಿಯಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣದಿಂದ ರೇವಣ್ಣ ಅವರನ್ನು ಬಿಡುಗಡೆ ಮಾಡಲಾಗಿದೆ.

ಪ್ರಕರಣದ ವಿಚಾರಣೆ ನಡೆಸುತ್ತಿದ್ದ, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಶ ಕೆ.ಎಂ‌.ಶಿವಕುಮಾರ್ ಈ ಕುರಿತ ಆದೇಶವನ್ನು ಸೋಮವಾರ ಪ್ರಕಟಿಸಿದ್ದಾರೆ.

ADVERTISEMENT

‘ಎಚ್.ಡಿ.ರೇವಣ್ಣ ಅವರ ವಿರುದ್ಧ ದೂರು ದಾಖಲಿಸುವಲ್ಲಿ ಸಂತ್ರಸ್ತೆಯು ವಿಳಂಬ ಮಾಡಿದ್ದಾರೆ. ಹಾಗಾಗಿ, ವಿಳಂಬ ತೋರಿರುವುದನ್ನು ಕ್ಷಮಿಸಿ ಶಿಕ್ಷಾರ್ಹ ಅಪರಾಧದ ವಿಚಾರಣೆ ಮುಂದುವರಿಸಲು ಇದು ಸೂಕ್ತ ಪ್ರಕರಣವಲ್ಲ’ ಎಂಬ ಅಭಿಪ್ರಾಯವನ್ನು ನ್ಯಾಯಾಧೀಶರು ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.