ADVERTISEMENT

‘ಸರ್ಕಾರದ ವರ್ಚಸ್ಸಿಗೆ ಧಕ್ಕೆ ತರಬೇಡಿ’

​ಪ್ರಜಾವಾಣಿ ವಾರ್ತೆ
Published 9 ಜನವರಿ 2019, 19:40 IST
Last Updated 9 ಜನವರಿ 2019, 19:40 IST
   

ಬೆಂಗಳೂರು: ‘ಮೈತ್ರಿ ಸರ್ಕಾರದ ವರ್ಚಸ್ಸಿಗೆ ಧಕ್ಕೆ ತರುವ ರೀತಿಯಲ್ಲಿ ಯಾರೂ ಹೇಳಿಕೆಗಳನ್ನು ನೀಡಬಾರದು’ ಎಂದು ಪಕ್ಷದ ಸಚಿವರು ಮತ್ತು ಶಾಸಕರಿಗೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ತಾಕೀತು ಮಾಡಿದರು.

ನಗರದ ಜೆ.ಪಿ.ಭವನದಲ್ಲಿ ಪಕ್ಷದ ಮುಖಂಡರ ಸಭೆಯಲ್ಲಿ ಮಾತನಾಡಿ, ಮೈತ್ರಿ ಸರ್ಕಾರ ಉಳಿಸಿಕೊಂಡು ಹೋಗಬೇಕಾದ ಅನಿವಾರ್ಯತೆ ಇದೆ. ಆ‌ದ್ದರಿಂದ ಎಲ್ಲರೂ ಸಂಯಮದಿಂದ ವರ್ತಿಸಬೇಕಾಗಿದೆ ಎಂದರು.

‘ಲೋಕಸಭೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಬೇಕಾಗಿದೆ. ಶೀಘ್ರ ಈ ಬಗ್ಗೆ ತೀರ್ಮಾನ ಮಾಡಬೇಕಾಗಿದೆ. ಇದೇ 29 ಮತ್ತು 30 ರಂದು ರಾಷ್ಟ್ರೀಯ ಕಾರ್ಯಕಾರಿಣಿ ನಡೆಸಲು ಉದ್ದೇಶಿಸಲಾಗಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.