ADVERTISEMENT

ವೈದ್ಯರ ಸಲಹೆ ಮೇರೆಗೆ ಎಚ್‌ಡಿಕೆ 10 ದಿನ ವಿಶ್ರಾಂತಿ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2019, 10:25 IST
Last Updated 5 ಡಿಸೆಂಬರ್ 2019, 10:25 IST
ಎಚ್‌.ಡಿ.ಕುಮಾರಸ್ವಾಮಿ (ಸಂಗ್ರಹ ಚಿತ್ರ)
ಎಚ್‌.ಡಿ.ಕುಮಾರಸ್ವಾಮಿ (ಸಂಗ್ರಹ ಚಿತ್ರ)   

ಬೆಂಗಳೂರು:ಉಪಚುನಾವಣೆ ಪ್ರಚಾರದ ವೇಳೆ ಮಾಜಿ‌ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಬಳಲಿದ್ದು ವೈದ್ಯರ ಸೂಚನೆ ಮೇರೆಗೆ ಅವರು 10 ದಿನಗಳ ವಿಶ್ರಾಂತಿ ಪಡೆಯಲಿದ್ದಾರೆ.

ಈ ಅವಧಿಯಲ್ಲಿ ಯಾವುದೇ ಪ್ರವಾಸ,ರಾಜಕೀಯ ನಾಯಕರು, ಸಾರ್ವಜನಿಕರ ಭೇಟಿ ಮಾಡದೇ ವಿಶ್ರಾಂತಿ ಪಡೆಯಬೇಕೆಂದು ವೈದ್ಯರು ಸೂಚಿಸಿರುವ ಹಿನ್ನೆಲೆಯಲ್ಲಿ ಎಚ್‌ಡಿಕೆಸಾರ್ವಜನಿಕ ಭೇಟಿಗೆ ಲಭ್ಯವಿರುವುದಿಲ್ಲ.

ಬಳಲಿಕೆ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರು ಬುಧವಾರ ವೈದ್ಯರ ಸೂಚನೆ ಮೇರೆಗೆ ಹಲವು ತಪಾಸಣೆಗೆ ಒಳಪಟ್ಟರು. ರಕ್ತದಲ್ಲಿ ಸೋಂಕು ಉಂಟಾಗಿರುವುದು ಪರೀಕ್ಷಾ ವರದಿಗಳಿಂದ ಗೊತ್ತಾಗಿದೆ. ಇದೇ ಹಿನ್ನೆಲೆಯಲ್ಲಿ ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದಾರೆ.

ADVERTISEMENT

2009ರಲ್ಲಿ ಉತ್ತರ ಕರ್ನಾಟಕ ಪ್ರವಾಹ ಪೀಡಿತರ ಪರಿವೀಕ್ಷಣೆಗೆ ಹೋಗಿದ್ದಾಗ ಇದೇ ರೀತಿ ಅವರಿಗೆಸೋಂಕು ಉಂಟಾಗಿತ್ತು. ಸಾರ್ವಜನಿಕರು ಸಹಕರಿಸಬೇಕಾಗಿ ಎಚ್‌ಡಿಕೆಕುಟುಂಬ ಮನವಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.