ADVERTISEMENT

ವಿಜಯಪುರ: ಕ್ವಾರಂಟೈನ್‍ಗೆ ಶಾಲೆ ನೀಡದ ಮುಖ್ಯಶಿಕ್ಷಕ ಅಮಾನತು

​ಪ್ರಜಾವಾಣಿ ವಾರ್ತೆ
Published 14 ಮೇ 2020, 13:49 IST
Last Updated 14 ಮೇ 2020, 13:49 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ವಿಜಯಪುರ: ಹೊರ ರಾಜ್ಯದಿಂದ ಜಿಲ್ಲೆಗೆ ಬಂದ ವಲಸೆ ಕಾರ್ಮಿಕರನ್ನು ಕ್ವಾರಂಟೈನ್ ಮಾಡಲು ಶಾಲೆಯಲ್ಲಿ ಸ್ಥಳಾವಕಾಶ ನೀಡದ ಕಾರಣಕ್ಕೆ ಮುಖ್ಯ ಶಿಕ್ಷಕರೊಬ್ಬರನ್ನು ವಿಜಯಪುರ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಪ್ರಸನ್ನಕುಮಾರ ಸೇವೆಯಿಂದ ಅಮಾನತುಗೊಳಿಸಿದ್ದಾರೆ.

ಸಿಂದಗಿ ತಾಲ್ಲೂಕಿನ ದೇವರನಾವದಗಿ ಸರ್ಕಾರಿ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಅಶೋಕ ರಡ್ಡೇರ ಅವರನ್ನು ಅಮಾನತುಗೊಳಿಸಿ, ಇಲಾಖೆ ವಿಚಾರಣೆ ಕಾಯ್ದಿರಿಸಲಾಗಿದೆ.

ಅಮಾನತಿನ ಅವಧಿಯಲ್ಲಿ ಮೇಲಧಿಕಾರಿಗಳ ಅನುಮತಿ ಪಡೆಯದೇ ಕೇಂದ್ರ ಸ್ಥಾನ ಬಿಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.