ಬೆಂಗಳೂರು: ರಾಜ್ಯದ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಬಳ್ಳಾರಿ ಜಿಲ್ಲೆಗಳಲ್ಲಿ ಅ.9ರಂದು ಭಾರಿ ಮಳೆಯ ಮುನ್ಸೂಚನೆ ಇರುವುದರಿಂದ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ ಜಿಲ್ಲೆಗಳಲ್ಲಿ ಅ.10ರಿಂದ ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಲ್ಲಿ ಇದೇ 12ರಿಂದ ಹೆಚ್ಚು ಮಳೆಯಾಗುವ ಸಾಧ್ಯತೆ
ಇದೆ.
ಉಳಿದ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದೆ. ಕೆಲ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ತಿಳಿಸಿದೆ.
ಮಳೆ ಎಲ್ಲಿ, ಎಷ್ಟು?: ಕೊಪ್ಪಳ, ಚಿಂತಾಮಣಿಯಲ್ಲಿ ತಲಾ 9 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಶಿರಾ 8, ಪಾವಗಡ 7, ಬೆಳ್ತಂಗಡಿ, ಹುಕ್ಕೇರಿ, ಮಧುಗಿರಿ 5, ನಿಪ್ಪಾಣಿ, ಕೋಲಾರ 4, ದಾವಣಗೆರೆ , ಶಿಡ್ಲಘಟ್ಟ 3, ಗೌರಿಬಿದನೂರು 2, ಚಿಕ್ಕೋಡಿ, ತೊಂಡೆಬಾವಿ, ಅರಕಲಗೂಡು ಹಾಗೂ ಹೊಸಪೇಟೆಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.
ಶಿರಾಲಿಯಲ್ಲಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಹಾಗೂ ಬೀದರ್ನಲ್ಲಿ 19 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.