ADVERTISEMENT

ಕಲ್ಯಾಣ ಕರ್ನಾಟಕ, ಕರಾವಳಿಯಲ್ಲಿ ಉತ್ತಮ ಮಳೆ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2021, 19:49 IST
Last Updated 7 ಸೆಪ್ಟೆಂಬರ್ 2021, 19:49 IST
ಬೀದರ್ ಜಿಲ್ಲೆ ಕಮಲನಗರ ತಾಲ್ಲೂಕಿನ ಸೋನಾಳ ಗ್ರಾಮದ ಹೊಲದಲ್ಲಿನ ತೊಗರಿ, ಸೋಯಾ ಬೆಳೆಯಲ್ಲಿ ನೀರು ನಿಂತಿರುವುದು
ಬೀದರ್ ಜಿಲ್ಲೆ ಕಮಲನಗರ ತಾಲ್ಲೂಕಿನ ಸೋನಾಳ ಗ್ರಾಮದ ಹೊಲದಲ್ಲಿನ ತೊಗರಿ, ಸೋಯಾ ಬೆಳೆಯಲ್ಲಿ ನೀರು ನಿಂತಿರುವುದು   

ಕಲಬುರ್ಗಿ/ಮಂಗಳೂರು/ಮಡಿಕೇರಿ: ಕಲ್ಯಾಣ ಕರ್ನಾಟಕ, ಕರಾವಳಿ ಜಿಲ್ಲೆಗಳು ಹಾಗೂ ಕೊಡಗಿನಲ್ಲಿ ಮಂಗಳವಾರ ಉತ್ತಮ ಮಳೆಯಾಗಿದೆ.

ಮಹಾರಾಷ್ಟ್ರದ ಹಲವೆಡೆ ಭಾರಿ ಮಳೆ ಸುರಿಯುತ್ತಿರುವುದರಿಂದ ಭೀಮಾ ನದಿ ತುಂಬಿ ಹರಿಯು
ತ್ತಿದೆ.ಮಂಗಳವಾರ 95 ಸಾವಿರ ‌ಕ್ಯುಸೆಕ್‌ ನೀರನ್ನುಸನ್ನತಿ ಬ್ರಿಜ್‌ ಕಂ ಬ್ಯಾರೇಜ್‌ನಿಂದ ಭೀಮಾ ನದಿಗೆ ಹರಿಸಲಾಗುತ್ತಿದೆ.

ಯಾದಗಿರಿ ಜಿಲ್ಲೆಯ ಭೀಮಾ ನದಿ ಸೇತುವೆ ಬಳಿ ಇರುವ ಕಂಗಳೇಶ್ವರ ಹಾಗೂ ವಿರಾಂಜನೇಯ ದೇಗುಲಗಳು ಜಲಾವೃತವಾಗಿವೆ. ಯಾದಗಿರಿ ನಗರ ಸೇರಿದಂತೆ ಜಿಲ್ಲೆಯ ಶಹಾಪುರ, ಸುರಪುರ, ಯಾದಗಿರಿ, ಗುರುಮಠಕಲ್‌, ವಡಗೇರಾ, ಹುಣಸಗಿ ತಾಲ್ಲೂಕಿನಲ್ಲಿ ಮಳೆಯಾಗಿದೆ.

ADVERTISEMENT

ಕಲಬುರ್ಗಿ ನಗರ ಸೇರಿದಂತೆ ಆಳಂದ, ಚಿಂಚೋಳಿ, ಕಾಳಗಿ, ಯಡ್ರಾಮಿ, ಸೇಡಂ, ಚಿತ್ತಾಪುರ ತಾಲ್ಲೂಕಿನ ಹಲವೆಡೆ ಮಳೆಯಾಗಿದೆ. ಚಿಂಚೋಳಿ ತಾಲ್ಲೂಕಿನ 20 ಕೆರೆಗಳು ಈಚೆಗೆ ಸುರಿದ ಮಳೆಯಿಂದಾಗಿ ಭರ್ತಿಯಾಗಿವೆ.

ಬೀದರ್‌ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಕಾರಂಜಾ ಜಲಾಶಯ, ಬಸವಕಲ್ಯಾಣ ತಾಲ್ಲೂಕಿನ ಚುಳಕಿನಾಲಾ, ಮೇಲ್ದಂಡೆ ಮುಲ್ಲಾಮರಿ ಜಲಾಶಯ ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ಹರಿಯ ಬಿಡಲಾಗುತ್ತಿದೆ.

ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಬೆಳೆಗಳು ನೀರಿನಲ್ಲಿ ಮುಳುಗಿವೆ. ಮಳೆ ಕಾರಣ ಬೆಳೆ ಸಮೀಕ್ಷೆಗೆ ತೊಡಕಾಗಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕರಾವಳಿಯಲ್ಲಿ ಉತ್ತಮ ಮಳೆ: ಕರಾವಳಿ ಜಿಲ್ಲೆಗಳಲ್ಲಿ ನಿರಂತರ ಮಳೆ ಮುಂದುವರಿದಿದ್ದು, ಒಂದು ಮನೆಗೆ ಭಾಗಶಃ ಹಾನಿಯಾಗಿದೆ. 4 ವಿದ್ಯುತ್‌ ಕಂಬಗಳು ಹಾಗೂ 200
ಮೀಟರ್ ವಿದ್ಯುತ್‌ ಮಾರ್ಗಕ್ಕೆ ಹಾನಿಯಾಗಿದೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಕೋಣಿಯಲ್ಲಿ 10.9 ಸೆಂ.ಮೀ ಮಳೆಯಾಗಿದೆ. ಬೈಂದೂರು ತಾಲ್ಲೂಕಿನ ಶಿರೂರು ಗ್ರಾಮದಲ್ಲಿ ಮರಬಿದ್ದು ಮನೆಗೆ ಹಾನಿಯಾಗಿದೆ. ಸೆ.12ರವರೆಗೆ ಕರಾವಳಿಯಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವ್ಯಕ್ತಿ ಸಾವು(ಶಿವಮೊಗ್ಗವರದಿ): ಸಂತೇಬೆನ್ನೂರು ಸಮೀಪದ ದೊಡ್ಡಮಲ್ಲಾಪುರ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಮನಗೋಡೆ ಕುಸಿದು ದೇವೇಂದ್ರಪ್ಪ (65) ಸಾವನ್ನಪ್ಪಿದ್ದಾರೆ.

ಕೊಡಗಿನ ವಿವಿಧೆಡೆ ಧಾರಾಕಾರ ಮಳೆ: ಕೊಡಗು ಜಿಲ್ಲೆಯ ಮಡಿಕೇರಿ, ನಾಪೋಕ್ಲು, ಭಾಗಮಂಡಲ, ಮಾದಾಪುರ, ಸುಂಟಿಕೊಪ್ಪ, ಗರ್ವಾಲೆ, ಸೂರ್ಲಬ್ಬಿ ಭಾಗದಲ್ಲಿ ಮಂಗಳವಾರ ದಿನವಿಡೀ ಧಾರಾಕಾರ ಮಳೆಯಾಗಿದೆ. ಜಿಲ್ಲೆಯಲ್ಲಿ ಮತ್ತೆ ಬಿರುಸಿನ ಮಳೆಯಾಗುತ್ತಿದ್ದು
ನದಿಗಳಲ್ಲಿ ನೀರಿನಮಟ್ಟ ಏರಿಕೆ ಕಂಡು
ಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.