ADVERTISEMENT

ಕರಾವಳಿ, ಮಲೆನಾಡಿನಲ್ಲಿ ಬಿರುಸಾದ ಮಳೆ: ರೈಲು ನಿಲ್ದಾಣಕ್ಕೆ ನುಗ್ಗಿದ ನೀರು

​ಪ್ರಜಾವಾಣಿ ವಾರ್ತೆ
Published 18 ಜುಲೈ 2019, 20:00 IST
Last Updated 18 ಜುಲೈ 2019, 20:00 IST
ಮಂಗಳೂರು ಕೇಂದ್ರ ರೈಲು ನಿಲ್ದಾಣದೊಳಗೆ ನೀರು ನಿಂತಿರುವುದು
ಮಂಗಳೂರು ಕೇಂದ್ರ ರೈಲು ನಿಲ್ದಾಣದೊಳಗೆ ನೀರು ನಿಂತಿರುವುದು   

ಮಂಗಳೂರು: ಜಿಲ್ಲೆಯಾದ್ಯಂತ ಬುಧವಾರ ರಾತ್ರಿಯಿಂದಲೇ ಉತ್ತಮ ಮಳೆಯಾಗುತ್ತಿದೆ. ಮಂಗಳೂರು ನಗರದಲ್ಲಿ ಗುರುವಾರ ಬೆಳಿಗ್ಗೆ ಸುರಿದ ಮಳೆಗೆ ಹಲವೆಡೆ ಕೃತಕ ನೆರೆ ಸೃಷ್ಟಿಯಾಗಿತ್ತು.

ಒಳಚರಂಡಿ ಕಾಮಗಾರಿ ನಡೆಯುತ್ತಿರುವ ಪರಿಣಾಮ ಮಂಗಳೂರು ಕೇಂದ್ರ ರೈಲು ನಿಲ್ದಾಣದೊಳಗೆ ಮಳೆ ನೀರು ನುಗ್ಗಿದೆ. ಟಿಕೆಟ್‌ ಕೌಂಟರ್, ಪ್ರವೇಶ ದ್ವಾರ, ಮುಂಭಾಗದ ರಸ್ತೆ, ಪಾರ್ಕಿಂಗ್‌ ಸ್ಥಳದಲ್ಲಿ ನೀರು ನಿಂತಿದ್ದು, ಹೊರಹಾಕಲು ಸಿಬ್ಬಂದಿ ಶ್ರಮಿಸಿದರು.

ಪುತ್ತೂರು, ಸುಳ್ಯ, ಬಂಟ್ವಾಳ, ಬೆಳ್ತಂಗಡಿ ಭಾಗದಲ್ಲಿ ಉತ್ತಮ ಮಳೆಯಾಗಿದ್ದು, ನೇತ್ರಾವತಿ, ಕುಮಾರಧಾರಾ, ಪಯಸ್ವಿನಿ, ಪಲ್ಗುಣಿ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.

ADVERTISEMENT

ಸಾಧಾರಣ ಮಳೆ: ಚಿಕ್ಕಮಗಳೂರು ನಗರದ ವಿವಿಧೆಡೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುರುವಾರ ಸಾಧಾರಣ ಮಳೆಯಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.