ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಒಂದೆಡೆ, ನದಿ–ಕೆರೆಗಳು ತುಂಬಿ ಹರಿದು ಕೋಡಿ ಬೀಳುತ್ತಿದ್ದರೆ, ಮತ್ತೊಂದೆಡೆ ಬೆಳೆಗಳು ಮಳೆ ನೀರಿಗೆ ಆಹುತಿಯಾಗುತ್ತಿವೆ. ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಐತಿಹಾಸಿಕ ಮಾವತ್ತೂರು ಕೆರೆ 25 ವರ್ಷಗಳ ನಂತರ ಕೋಡಿ ಹರಿದರೆ, ತೀತಾ ಜಲಾಶಯ 20 ವರ್ಷಗಳ ಬಳಿಕ ಮೈದುಂಬಿ ಹರಿಯುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.