ADVERTISEMENT

ರಾಜ್ಯದಲ್ಲಿ ಮಳೆ ಸಾಧ್ಯತೆ: 16 ಜಿಲ್ಲೆಗಳಲ್ಲಿ 'ಯೆಲ್ಲೊ ಅಲರ್ಟ್'

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2020, 18:50 IST
Last Updated 31 ಆಗಸ್ಟ್ 2020, 18:50 IST
ಹುಬ್ಬಳ್ಳಿಯ ಚನ್ನಮ್ಮ ವೃತ್ತದ ಬಳಿ ಗುರುವಾರ ಜಿಟಿಜಿಟಿ ಮಳೆಯಲ್ಲಿ ಕಂಡ ಬಂದ ಜನಜೀವನ
ಹುಬ್ಬಳ್ಳಿಯ ಚನ್ನಮ್ಮ ವೃತ್ತದ ಬಳಿ ಗುರುವಾರ ಜಿಟಿಜಿಟಿ ಮಳೆಯಲ್ಲಿ ಕಂಡ ಬಂದ ಜನಜೀವನ   

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸೆ.1ರಿಂದ 4ರವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇರುವುದರಿಂದ ಮಂಗಳವಾರದಂದು 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ.

ಮಳೆ-ಎಲ್ಲಿ,ಎಷ್ಟು?: ಉತ್ತರ ಕನ್ನಡ ಜಿಲ್ಲೆಯ ಮಂಕಿ ಪ್ರದೇಶದಲ್ಲಿ 9 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಹೊಸಕೋಟೆ 7, ಶಿರಾ 6, ಕಾರವಾರ, ಶ್ರೀನಿವಾಸಪುರ, ಬಂಗಾರಪೇಟೆ, ಚಿಂತಾಮಣಿ, ಕುಣಿಗಲ್ 4, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ 3, ಆಗುಂಬೆ, ಚಾಮರಾಜನಗರ, ಮದ್ದೂರು, ಬೆಂಗಳೂರು, ಗುಬ್ಬಿ, ತುಮಕೂರು, ಗೌರಿಬಿದನೂರು 2, ಬೆಳಗಾವಿ, ಮಡಿಕೇರಿ, ಕೋಲಾರ, ಗುಡಿಬಂಡೆ, ಮಧುಗಿರಿ, ಮಾಗಡಿ, ಚನ್ನಪಟ್ಟಣ, ಕನಕಪುರ, ಬಾಗೇಪಲ್ಲಿ ಹಾಗೂ ನೆಲಮಂಗಲದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.