ADVERTISEMENT

ಮರ ಬಿದ್ದು ಸಾವು

​ಪ್ರಜಾವಾಣಿ ವಾರ್ತೆ
Published 11 ಮೇ 2019, 20:15 IST
Last Updated 11 ಮೇ 2019, 20:15 IST

ಬೆಂಗಳೂರು: ರಾಜಧಾನಿ ಬೆಂಗಳೂರು, ಮೈಸೂರು, ಚಾಮರಾಜನಗರ ಹಾಗೂ ಕೋಲಾರ ಜಿಲ್ಲೆಯ ಹಲವೆಡೆ ಶನಿವಾರ ಮಳೆಯಾಗಿದೆ. ಕೋಲಾರ ಜಿಲ್ಲೆ ಮುಳಬಾಗಿಲು ಸಮೀಪದ ತೊರಡಿ ಗ್ರಾಮದ ಬಳಿ ಮಳೆ–ಗಾಳಿಗೆ ಆಲದ ಮರ ಉರುಳಿ ಬಿದ್ದು ಪಾರ್ವತಮ್ಮ (40) ಎಂಬುವವರು ಮೃತಪಟ್ಟಿದ್ದಾರೆ.

ಮಳೆಯಿಂದ ರಕ್ಷಣೆ ಪಡೆಯಲು ಪಾರ್ವತಮ್ಮ ಅಶ್ವತ್ಥಕಟ್ಟೆ ಬಳಿ ನಿಂತಿದ್ದಾಗ ಈ ಅವಘಡ ನಡೆದಿದೆ. ತಹಶೀಲ್ದಾರ್ ಬಿ.ಎನ್.ಪ್ರವೀಣ್ ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು.

ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಮಳೆಯಾಗಿದೆ. ಮೈಸೂರಿನಲ್ಲಿ ಗುಡುಗು ಸಹಿತ 15 ನಿಮಿಷ ಕಾಲ ಮಳೆಯಾಗಿದ್ದು, ಜಿಲ್ಲೆಯ ಪಿರಿಯಾಪಟ್ಟಣ, ಹುಣಸೂರು, ಕೆ.ಆರ್‌.ನಗರ, ತಿ.ನರಸೀಪುರ, ನಂಜನಗೂಡಿನಲ್ಲಿ ಸಾಧಾರಣವಾಗಿ ಸುರಿದಿದೆ.‌

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.