ADVERTISEMENT

ವಿವಿಧೆಡೆ ಮಳೆ: ತುಂಬಿದ ಕೆರೆ ಕಟ್ಟೆ

ಮೈದುಂಬಿದ ನದಿಗಳು, ಕೆಆರ್‌ಎಸ್‌ನಲ್ಲಿ ಹೆಚ್ಚಿದ ಒಳಹರಿವು

​ಪ್ರಜಾವಾಣಿ ವಾರ್ತೆ
Published 18 ಮೇ 2022, 19:02 IST
Last Updated 18 ಮೇ 2022, 19:02 IST
ಹಾಸನ ಜಿಲ್ಲೆಯ ಹಿರೀಸಾವೆ ದೊಡ್ಡ ಕೆರೆಯಲ್ಲಿ ಬುಧವಾರ ಕೋಡಿ ಬಿದ್ದಾಗ ಮಕ್ಕಳೊಂದಿಗೆ ಗ್ರಾಮಸ್ಥರು ನೀರಿನಲ್ಲಿ ಆಟವಾಡಿ, ಸಂಭ್ರಮಿಸಿದರು.
ಹಾಸನ ಜಿಲ್ಲೆಯ ಹಿರೀಸಾವೆ ದೊಡ್ಡ ಕೆರೆಯಲ್ಲಿ ಬುಧವಾರ ಕೋಡಿ ಬಿದ್ದಾಗ ಮಕ್ಕಳೊಂದಿಗೆ ಗ್ರಾಮಸ್ಥರು ನೀರಿನಲ್ಲಿ ಆಟವಾಡಿ, ಸಂಭ್ರಮಿಸಿದರು.   

ಬೆಂಗಳೂರು: ರಾಜ್ಯದಾದ್ಯಂತ ಮಂಗಳ ವಾರ ರಾತ್ರಿಯಿಂದ ಧಾರಾಕಾರವಾಗಿ ಮಳೆ ಸುರಿದಿದ್ದು, ಬುಧವಾರ ಹಲವೆಡೆ ಕೆರೆ, ಕಟ್ಟೆಗಳು ತುಂಬಿ ಕೋಡಿ ಹರಿದಿವೆ. ಕಾವೇರಿ, ಶಿಂಷಾ, ಕಬಿನಿ, ಅರ್ಕಾವತಿ, ಉತ್ತರ ಪಿನಾಕಿನಿ ಸೇರಿದಂತೆ ಹಲವುನದಿಗಳಲ್ಲಿ ನೀರಿನಮಟ್ಟ ಏರಿಕೆಯಾಗಿದ್ದು,ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿದೆ.

ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಕೆಆರ್‌ಎಸ್‌ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾ ಣವೂ ಹೆಚ್ಚಾಗಿದೆ.ಬುಧವಾರ ಸಂಜೆ ವೇಳೆಗೆ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 100.95 ಅಡಿ ದಾಖ ಲಾಗಿತ್ತು. 5,396 ಕ್ಯುಸೆಕ್‌ ಒಳಹರಿವು, 1,065 ಕ್ಯುಸೆಕ್‌ ಹೊರ ಹರಿವು ಇತ್ತು. ಕಳೆದ ವರ್ಷ ಇದೇ ವೇಳೆಗೆ 86.80 ಅಡಿ ನೀರು ಸಂಗ್ರಹವಾಗಿತ್ತು.

ಮೈದುಂಬಿದ ಉತ್ತರ ಪಿನಾಕಿನಿ:ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಉತ್ತರ ಪಿನಾಕಿನಿ ನದಿಯು ತುಂಬಿ ಹರಿಯುತ್ತಿದೆ.ಈ ಹಿಂದೆ ಬರಡಾಗಿದ್ದ ಉತ್ತರ ಪಿನಾಕಿನಿಯ ಒಡಲು ಕಳೆದ ವರ್ಷದಿಂದ ತುಂಬುತ್ತಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ಬಾರಿ ನದಿಯು ಪೂರ್ವ ಮುಂಗಾರು ಹಂಗಾಮಿನಲ್ಲಿಯೇ ಮೈದುಂಬಿದೆ.

ADVERTISEMENT

ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಮಂಚನಬೆಲೆ ಜಲಾ ಶಯಭರ್ತಿಯಾಗುವ ಹಂತ ತಲುಪಿದ್ದು, ಬುಧವಾರ ಮಧ್ಯಾಹ್ನ ಡ್ಯಾಂನಿಂದ ಅರ್ಕಾವತಿ ನದಿಗೆ ನೀರು ಬಿಡುಗಡೆ ಮಾಡಲಾಯಿತು. ಜಲಾಶಯದಲ್ಲಿ ನೀರು ಸಂಗ್ರಹಣಾ ಸಾಮರ್ಥ್ಯ 1.22 ಟಿಎಂಸಿ ಅಡಿ.

ತುಂಬಿ ಹರಿದ ಕೆರೆಗಳು:ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕು ಹೊನ್ನಾವರದ ಹಿರಿಕೆರೆ, ಕಲ್ಕೆರೆ, ಹುಲಿಕೆರೆ, ಚನ್ನಾಪುರ ಕೆರೆ. ಬಿಂಡಿಗ ನವಿಲೆ ಕೆರೆಗಳು ತುಂಬಿ ಹರಿದಿವೆ. ದುಮ್ಮಸಂದ್ರ ಅಣೆಕಟ್ಟೆ ಮೇಲೆ ನೀರು ಹರಿಯುತ್ತಿದೆ.ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ತೋವಿನಕೆರೆ ಸಮೀಪ 4 ಕೆರೆಗಳು ಭರ್ತಿಯಾಗಿವೆ.

ಮಳೆ: ನಾಲ್ವರ ಸಾವು

ಭಾರೀ ಮಳೆ ಪರಿಣಾಮ ಬೆಂಗಳೂರಿನಲ್ಲಿ ಇಬ್ಬರು ಸೇರಿದಂತೆ ರಾಜ್ಯದಲ್ಲಿ ನಾಲ್ವರು ಅಸುನೀಗಿದ್ದಾರೆ.ಬೆಂಗಳೂರಿನ ಉಲ್ಲಾಳ ಉಪಕಾರ್‌ ಲೇಔಟ್‌ ಬಸ್‌ನಿಲ್ದಾಣದ ಬಳಿ ನಡೆಯುತ್ತಿದ್ದ 5ನೇ ಹಂತದ ಕಾವೇರಿ ನೀರು ಸರಬರಾಜು ಕಾಮಗಾರಿಯಲ್ಲಿ ಕಬ್ಬಿಣದ ಪೈಪ್‌ನಲ್ಲಿಸಿಲುಕಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.ಬಿಹಾರದ ದೇವ್‌ಭರತ್‌ ಕುಶ್ವಾಹ (36) ಹಾಗೂ ಉತ್ತರಪ್ರದೇಶದ ಅಂಕಿತ್‌ಕುಮಾರ್‌ ಸಹಾನಿ (23) ಮೃತಪಟ್ಟವರು.

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಹಳ್ಳಿಮೈಸೂರು ಹೋಬಳಿ ರಂಗೇನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆ ಗೋಡೆ ಕುಸಿದು ಚನ್ನರಾಯಪಟ್ಟಣ ತಾಲ್ಲೂಕಿನ ದಿಡಗ ಹೊಸೂರು ಗ್ರಾಮದ ಶಿವಕುಮಾರ (26) ಕೊನೆಯುಸಿರೆಳೆದಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ಭಾರೀ ಮಳೆ ಪರಿಣಾಮ ನಗರದ ಕೋಳಿ ಮಾಂಸ ಮಾರಾಟದ ಅಂಗಡಿಯಲ್ಲಿ ವಿದ್ಯುತ್‌ ಪ್ರವಹಿಸಿ ಗೌರಿಬಿದನೂರು ತಾಲ್ಲೂಕಿನ ಮರಳೂರು ಗ್ರಾಮದ ಶ್ರೀರಾಮು (33) ಅವರು ಅಸುನೀಗಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.