ಮೈಸೂರಿನ ಡಾ. ಶಿವಕುಮಾರ ಸ್ವಾಮೀಜಿ ವೃತದಲ್ಲಿ ಸೋಮವಾರ ಸುರಿದ ಮಳೆಯಲ್ಲೇ ಬೈಸಿಕಲ್ ಸವಾರರೊಬ್ಬರು ಸಾಗಿದರು.
-ಪ್ರಜಾವಾಣಿ ಚಿತ್ರ/ಅನೂಪ್ ರಾಘ. ಟಿ.
ಬೆಂಗಳೂರು: ರಾಜ್ಯದ ಮಲೆನಾಡು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಇನ್ನೂ ನಾಲ್ಕು ದಿನಗಳು ಗುಡುಗು ಸಹಿತ ಧಾರಾಕಾರ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದೇ 21 ಹಾಗೂ 22ರಂದು ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿಯುವ ಸಾಧ್ಯತೆಯಿದ್ದು ‘ಯೆಲ್ಲೊ ಅಲರ್ಟ್’ ಸೂಚನೆ ನೀಡಲಾಗಿದೆ.
23ರಂದು ದಕ್ಷಿಣ ಕನ್ನಡ, ಕೋಲಾರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ, ಚಿಕ್ಕಮಗಳೂರು, ರಾಮನಗರ, ಚಾಮರಾಜನಗರ ಹಾಗೂ 24ರಂದು ಉಡುಪಿ, ದಕ್ಷಿಣ ಕನ್ನಡ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಸೂಚನೆ ಕೊಡಲಾಗಿದೆ.
ಹಾವೇರಿ, ವಿಜಯಪುರ, ಧಾರವಾಡ, ಗದಗ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಬಿರುಗಾಳಿಯು ಪ್ರತಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಬೀಸಲಿದೆ ಎಂದು ಸೂಚನೆ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.