ಚಿತ್ರದುರ್ಗ: ಗ್ರಾಮ ಪಂಚಾಯಿತಿ ಚುನಾವಣೆ ವೇಳೆ ಇಲ್ಲಿ ಹಣದ ಹೊಳೆ ಹರಿಯುವುದಿಲ್ಲ. ಮದ್ಯ ಸೇರಿ ಇತರೆ ವಸ್ತುಗಳ ಆಮಿಷಕ್ಕೂ ಜನ ಒಳಗಾಗುವುದಿಲ್ಲ. ಮುಖ್ಯವಾಗಿ ಇಲ್ಲಿ ಮತದಾನವೇ ನಡೆದಿಲ್ಲ. ಮೊದಲಿನಿಂದಲೂ ಅವಿರೋಧ ಆಯ್ಕೆಗೆ ಆದ್ಯತೆ ನೀಡಲಾಗಿದೆ.
ಚಿತ್ರದುರ್ಗ ತಾಲ್ಲೂಕಿನ ಕಡಬನಕಟ್ಟೆ ಗ್ರಾಮ ಪಂಚಾ ಯಿತಿಯಲ್ಲಿ ಪಂಚಾಯತ್ ರಾಜ್ ವ್ಯವಸ್ಥೆ ಜಾರಿಯಾದಾಗಿನಿಂದಲೂ ಈ ವ್ಯವಸ್ಥೆ ಇದೆ. ಮಂಡಲ ಪಂಚಾಯಿತಿ ವ್ಯವಸ್ಥೆ ಇದ್ದಾಗಲೂ ಅವಿರೋಧ ಆಯ್ಕೆ ನಡೆಯುತ್ತಿತ್ತು. ಇಲ್ಲಿ 6 ಸದಸ್ಯ ಸ್ಥಾನಗಳಿದ್ದು, ನಾಮಪತ್ರ ಸಲ್ಲಿಸುವಾಗ ಪ್ರತಿ ಸ್ಥಾನಕ್ಕೂ ಒಬ್ಬರೇ ಉಮೇದು ವಾರಿಕೆ ಸಲ್ಲಿಸುತ್ತಾರೆ. ಹೀಗಾಗಿ ಎಲ್ಲರೂ ಅವಿರೋಧವಾಗಿ ಆಯ್ಕೆಯಾಗುತ್ತಾ ಬಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.