ADVERTISEMENT

ಕೆಪಿಎಸ್‌ಸಿ ಸದಸ್ಯರಾಗಿ ಎಚ್‌.ಜಿ. ಪವಿತ್ರ ನೇಮಕ

​ಪ್ರಜಾವಾಣಿ ವಾರ್ತೆ
Published 28 ಜುಲೈ 2021, 19:31 IST
Last Updated 28 ಜುಲೈ 2021, 19:31 IST
ಪವಿತ್ರ
ಪವಿತ್ರ   

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಸದಸ್ಯರಾಗಿ ವಾಣಿಜ್ಯ ತೆರಿಗೆ ಇಲಾಖೆಯ (ಆರ್ಥಿಕ ಗುಪ್ತಚರ ಘಟಕ) ಜಂಟಿ ಆಯುಕ್ತ ಎಚ್‌.ಜಿ. ಪವಿತ್ರ ಅವರನ್ನು ನೇಮಿಸಲಾಗಿದೆ.

ಅಧಿಕಾರ ವಿಭಾಗದಿಂದ ಪವಿತ್ರ ಅವರನ್ನು ನೇಮಿಸಿ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರು ಬುಧವಾರ ಅಧಿಸೂಚನೆ ಹೊರಡಿಸಿದ್ದಾರೆ.

ಕೆಪಿಎಸ್‌ಸಿ ಸದಸ್ಯರಾಗಿದ್ದ ಶ್ರೀಕಾಂತ ರಾವ್‌ ಅವರು ಜುಲೈ 21ರಂದು ನಿವೃತ್ತರಾಗಿದ್ದರು. ಕೆಪಿಎಸ್‌ಸಿಯಲ್ಲಿ ಅಧ್ಯಕ್ಷ ಸೇರಿ ಒಟ್ಟು 14 ಸದಸ್ಯರಿದ್ದು, ಪವಿತ್ರ ಅವರ ನೇಮಕದಿಂದ ಎಲ್ಲ ಸ್ಥಾನಗಳು ಭರ್ತಿ ಆದಂತಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.