ADVERTISEMENT

‘ಖುಲಾಸೆ ಪ್ರಕರಣ: ಮರುಪರಿಶೀಲನೆ ವಿವರ ಸಲ್ಲಿಸಿ’

​ಪ್ರಜಾವಾಣಿ ವಾರ್ತೆ
Published 8 ಜನವರಿ 2020, 20:18 IST
Last Updated 8 ಜನವರಿ 2020, 20:18 IST

ಬೆಂಗಳೂರು: ‘ಖುಲಾಸೆಗೊಂಡ ಎಲ್ಲ ಕ್ರಿಮಿನಲ್ ಪ್ರಕರಣಗಳ ಮರುಪರಿಶೀಲನೆಗೆ ಸಂಬಂಧಿಸಿದಂತೆ 2014ರ ಅ.20ರಿಂದ ಈವರೆಗೆ ಎಷ್ಟು ಪ್ರಕರಣಗಳ ಮರುಪರಿಶೀಲನೆ ನಡೆಸಲಾಗಿದೆ ಎಂಬ ಬಗ್ಗೆ ವಿವರ ನೀಡಿ’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ.

ಈ ಕುರಿತಂತೆ ವಕೀಲ ಎಸ್. ಉಮಾಪತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

‘ರಾಜ್ಯ, ವಲಯ ಹಾಗೂ ಜಿಲ್ಲಾ ಮಟ್ಟದಲ್ಲಿ ಖುಲಾಸೆ ಮರುಪರಿಶೀಲನಾ ಸಮಿತಿಗಳು ಪ್ರತಿ ತಿಂಗಳು ಎಷ್ಟು ಸಭೆ ನಡೆಸಿವೆ ಹಾಗೂ ಎಷ್ಟು ಪ್ರಕರಣಗಳ ಮರುಪರಿಶೀಲನೆ ನಡೆಸಿವೆ ಎಂದು ಮಾಹಿತಿ ನೀಡಬೇಕು’ಎಂದು ನಿರ್ದೇಶಿಸಿ ವಿಚಾರಣೆ ಮುಂದೂಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.