ಬೆಂಗಳೂರು: ಕೋವಿಡ್ ಸೋಂಕಿಗೆ ಗುರಿಯಾಗಿ ಗುಣಮುಖರಾದ ಹೈಕೋರ್ಟ್ ಉದ್ಯೋಗಿಗೆ ಮುಖ್ಯ ನ್ಯಾಯಮೂರ್ತಿ ಅವರೇ ಗುಲಾಬಿ ಹೂ ನೀಡಿ ಬರಮಾಡಿಕೊಂಡರು.
ಪ್ರಥಮ ದರ್ಜೆ ಸಹಾಯಕಿ ಮೇರಿ ಜೋಸೆಫ್ ಅವರಿಗೆ ಸೋಂಕು ದೃಢಪಟ್ಟಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಹೋಂ ಕ್ವಾರಂಟೈನ್ ಅವಧಿಯನ್ನೂ ಮುಗಿಸಿ ಕಚೇರಿ ಕೆಲಸಕ್ಕೆ ಹಾಜರಾದರು. ಅವರಿಗಾಗಿ ಕಾದಿದ್ದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಅವರು ಕೈ ಮುಗಿದು, ಬಳಿಕ ಹೂ ನೀಡಿ ಸ್ವಾಗತಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.