ಬೆಂಗಳೂರು: ಅಕ್ರಮವಾಗಿ ಶಸ್ತಾಸ್ತ್ರ ಹೊಂದಿದ್ದಹಾಗೂ ಸಹೋದ್ಯೋಗಿ ಪತ್ರಕರ್ತನ ಹತ್ಯೆಗೆ ಸುಪಾರಿ ನೀಡಿದ ಆರೋಪದಡಿ ವಿಚಾರಣಾ ನ್ಯಾಯಾಲಯದಲ್ಲಿರುವ ಮೊಕದ್ದಮೆ ರದ್ದುಗೊಳಿಸುವಂತೆ ಕೋರಿ ಪತ್ರಕರ್ತ ರವಿ ಬೆಳಗೆರೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ಅರ್ಜಿ ಇನ್ನೂ ವಿಚಾರಣೆಗೆ ಬರಬೇಕಿದೆ.
‘ಮ್ಯಾಜಿಸ್ಟೇಟ್ ನ್ಯಾಯಾಲಯ ನನ್ನ ವಿರುದ್ಧ ನಡೆಸುತ್ತಿರುವ ವಿಚಾರಣೆ ಕಾನೂನು ಬಾಹಿರ. ದೂರಿನ ವಸ್ತುಸಂಗತಿಗಳು ಅಸಮಂಜಸವಾಗಿವೆ ಮತ್ತು ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿದೆ. ಆದ್ದರಿಂದ ವಿಚಾರಣೆ ರದ್ದುಗೊಳಿಸಬೇಕು’ ಎಂದು ರವಿ ಬೆಳಗೆರೆ ಕೋರಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.