ADVERTISEMENT

ರಮೇಶ್‌ ಜಾರಕಿಹೊಳಿ ಸಿ.ಡಿ ಪ್ರಕರಣ: ವಿಚಾರಣೆ ಇಂದು

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2021, 20:11 IST
Last Updated 14 ಸೆಪ್ಟೆಂಬರ್ 2021, 20:11 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಸಿ.ಡಿ ಪ್ರಕರಣದ ವಿಚಾರಣೆಯನ್ನು ಸಂತ್ರಸ್ತ ಯುವತಿ ಪರ ವಕೀಲರ ಕೋರಿಕೆ ಮೇರೆಗೆ ಹೈಕೋರ್ಟ್‌ ಬುಧವಾರಕ್ಕೆ ಮುಂದೂಡಿತು.

ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್‌ ಚಂದ್ರ ಶರ್ಮ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಯುವತಿ ಪರ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಹಾಜರಾಗಿ, ಅರ್ಜಿ ವಿಚಾರಣೆಯನ್ನು ಒಂದು ದಿನ ಮುಂದೂಡಬೇಕು ಎಂದು ಕೋರಿದರು.

ADVERTISEMENT

ತನಿಖೆ ಆರಂಭವಾದ ಬಳಿಕ ಸಿಆರ್‌ಪಿಸಿ ನಿಯಮ ಪಾಲಿಸಬೇಕಾಗುತ್ತದೆ. ಅದರಂತೆ ತನಿಖಾ ಅಂತಿಮ ವರದಿ ಸಲ್ಲಿಸಲು ಅನುಮತಿ ನೀಡಬೇಕು ಎಂದು ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ವಾದಿಸಿದರು.

ಎಸ್‌ಐಟಿ ತನಿಖೆಯನ್ನೇ ಯುವತಿ ಪ್ರಶ್ನಿಸಿದ್ದಾರೆ. ಅವರ ವಾದವನ್ನೂ ಆಲಿಸಬೇಕಾಗುತ್ತದೆ ಎಂದು ತಿಳಿಸಿದ ಪೀಠ, ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿತು.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.