ADVERTISEMENT

ಬಸನಗೌಡ ಪಾಟೀಲ ಯತ್ನಾಳ್‌ ವಿರುದ್ಧದ ನೋಟಿಸ್‌ಗೆ ಹೈಕೋರ್ಟ್‌ ತಡೆ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2024, 16:00 IST
Last Updated 8 ಆಗಸ್ಟ್ 2024, 16:00 IST
<div class="paragraphs"><p>ಹೈಕೋರ್ಟ್‌</p></div>

ಹೈಕೋರ್ಟ್‌

   

ಬೆಂಗಳೂರು: ಸಕ್ಕರೆ ಮತ್ತು ಜವಳಿ ಸಚಿವ ಶಿವಾನಂದ ಎಸ್‌.ಪಾಟೀಲ್‌ ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾರಿ ಮಾಡಿದ್ದ ಷೋಕಾಸ್‌ ನೋಟಿಸ್‌ಗೆ ಹೈಕೋರ್ಟ್‌ ತಡೆ ನೀಡಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ) ಜಾರಿಗೊಳಿಸಿದ್ದ ಷೋಕಾಸ್ ನೋಟಿಸ್‌ ಪ್ರಶ್ನಿಸಿ ಯತ್ನಾಳ್‌ ಸಲ್ಲಿಸಿದ್ದ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಗುರುವಾರ ವಿಚಾರಣೆ ನಡೆಸಿದರು.

ADVERTISEMENT

ದೂರುದಾರ ಸಚಿವ ಶಿವಾನಂದ ಪಾಟೀಲ್‌ ಅವರಿಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿತು. ಯತ್ನಾಳ್‌ ಪರ ಹೈಕೋರ್ಟ್‌ ವಕೀಲ ವೆಂಕಟೇಶ್‌ ಪಿ.ದಳವಾಯಿ ವಾದ ಮಂಡಿಸಿದರು.

ಪ್ರಕರಣವೇನು?

‘ಇತ್ತೀಚಿನ ಲೋಕಸಭೆ ಚುನಾವಣಾ ರ್‍ಯಾಲಿ ಸಂದರ್ಭದಲ್ಲಿ ಯತ್ನಾಳ್‌ ನನ್ನ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ್ದಾರೆ’ ಎಂದು ಆರೋಪಿಸಿ ಶಿವಾನಂದಪಾಟೀಲ್‌ ಅವರು, ಯತ್ನಾಳ್‌ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇದನ್ನು ವಿಚಾರಣೆಗೆ ಪರಿಗಣಿಸಿದ್ದ ವಿಚಾರಣಾ ನ್ಯಾಯಾಲಯ ಯತ್ನಾಳ್‌ ಅವರಿಗೆ ಷೋಕಾಸ್‌ ನೋಟಿಸ್‌ ಜಾರಿಗೊಳಿಸುವಂತೆ 2024ರ ಜುಲೈ 16ರಂದು ಆದೇಶಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.