ADVERTISEMENT

ನರ್ಸಿಂಗ್‌: ಸದನ ಸಮಿತಿ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

​ಪ್ರಜಾವಾಣಿ ವಾರ್ತೆ
Published 13 ಮೇ 2022, 19:26 IST
Last Updated 13 ಮೇ 2022, 19:26 IST

ಬೆಂಗಳೂರು: 2021 ಕ್ಕೂ ಮುನ್ನ ಅನುಮತಿ ‍ಪಡೆದನರ್ಸಿಂಗ್ ಕಾಲೇಜು ಗಳ ಮಾನ್ಯತೆ ಮತ್ತು ಅನುದಾನದ ಬಗ್ಗೆ ಪರಿಶೀಲನೆ ನಡೆಸಲು ಜಂಟಿ ಸದನ ಸಮಿತಿ ರಚಿಸುವ ವಿಧಾನಪರಿಷತ್ ಸಚಿವಾಲಯದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಈ ಕುರಿತ ಅರ್ಜಿಗಳನ್ನು ನ್ಯಾಯಮೂರ್ತಿ ಎಸ್. ಸುನಿಲ್ ದತ್ ಯಾದವ್ ಅವರಿದ್ದ ರಜಾಕಾಲದ ವಿಶೇಷ ನ್ಯಾಯಪೀಠ ವಿಚಾರಣೆ ನಡೆಸಿತು. ‘2021 ಕ್ಕೂ ಹಿಂದೆ ಆರಂಭ ವಾಗಿ ರುವ ನರ್ಸಿಂಗ್ ಕಾಲೇಜುಗಳ ಕುರಿತಂತೆ ಪರಿಶೀಲನೆ ನಡೆಸಲು ರಚಿಸಲಾಗಿರುವ ಜಂಟಿ ಸದನ ಸಮಿತಿಗೆ ತಡೆ ನೀಡಿದ ನ್ಯಾಯಪೀಠ, ಶಾಸಕಾಂಗದ ಅಧಿಕಾರಕ್ಕೆ ಸಂಬಂಧಿಸಿದಂತೆ ಕಾಯ್ದೆಯನ್ನು ಪುನರ್ ಪರಿಶೀಲಿಸುವ ಅಗತ್ಯವಿದೆ’ ಎಂದಿದೆ.

ಕರ್ನಾಟಕ ನರ್ಸಿಂಗ್ ಮತ್ತು ಆರೋಗ್ಯ ವಿಜ್ಞಾನಗಳ ನಿರ್ವಹಣೆಯ ರಾಜ್ಯ ಒಕ್ಕೂಟ, ಹೈದರಾಬಾದ್‌- ಕರ್ನಾಟಕ ನರ್ಸಿಂಗ್ ಮ್ಯಾನೇಜ್‌ಮೆಂಟ್ ಅಸೋಸಿಯೇಷನ್ ಮತ್ತು ಕರ್ನಾಟಕ ನರ್ಸಿಂಗ್ ಸಂಸ್ಥೆಗಳ ಮ್ಯಾನೇಜ್‌ಮೆಂಟ್ ಈ ಅರ್ಜಿ ಸಲ್ಲಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.