ADVERTISEMENT

ಹಿಜಾಬ್ ತೀರ್ಪು| ವಿಜಯೋತ್ಸವ, ಸಂಭ್ರಮಾಚರಣೆ ಬೇಡ – ಕಾರ್ಯಕರ್ತರಲ್ಲಿ ಬಿಜೆಪಿ ಮನವಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಮಾರ್ಚ್ 2022, 6:23 IST
Last Updated 15 ಮಾರ್ಚ್ 2022, 6:23 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಹಿಜಾಬ್ ಕುರಿತು ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪಿಗೆ ವಿಜಯೋತ್ಸವ, ಸಂಭ್ರಮಾಚರಣೆ ಮಾಡುವುದು ಬೇಡ ಎಂದು ಪಕ್ಷದ ಕಾರ್ಯಕರ್ತರಲ್ಲಿ ಬಿಜೆಪಿ ಮನವಿ ಮಾಡಿದೆ.

ತೀರ್ಪಿಗೆ ಸಂಬಂಧಿಸಿ ಸಾಮಾಜಿಕ ಮಾಧ್ಯಮ ‘ಕೂ’ನಲ್ಲಿ ಸಂದೇಶ ಪ್ರಕಟಿಸಿರುವ ಬಿಜೆಪಿ, ತೀರ್ಪನ್ನು ಎಲ್ಲರೂ ಸಮಚಿತ್ತದಿಂದ ಸ್ವೀಕರಿಸಬೇಕು ಎಂದು ವಿನಂತಿಸಿದೆ.

ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ಪ್ರಕಟವಾಗಿದೆ. ನ್ಯಾಯಾಲಯದ ತೀರ್ಪನ್ನು ಎಲ್ಲ ಕಾರ್ಯಕರ್ತರು ಅತ್ಯಂತ ಸಮಚಿತ್ತದಿಂದ ಸ್ವೀಕರಿಸಬೇಕು. ಯಾವುದೇ ಅನಗತ್ಯ ಗೊಂದಲಗಳಿಗೆ ಅವಕಾಶ ಮಾಡಿಕೊಡಬಾರದು. ವಿಜಯೋತ್ಸವ, ಮೆರವಣಿಗೆ, ಮಾಡಬಾರದು ಎಂದು ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮನವಿ ಮಾಡಿರುವುದಾಗಿ ಸಂದೇಶದಲ್ಲಿ ಉಲ್ಲೇಖಿಸಲಾಗಿದೆ.

ತೀರ್ಪಿನ ವಿರುದ್ಧ ಯಾವುದೇ ಪ್ರತಿಭಟನೆಯನ್ನು ಮಾಡಬಾರದು. ಜೊತೆಗೆ ಪ್ರತಿಕ್ರಿಯಾತ್ಮಕ ಪತ್ರಿಕೆ ಹೇಳಿಕೆಗಳನ್ನು ನೀಡಬೇಡಿ ಎಂದು ರಾಜ್ಯದ ಜನತೆಗೆ ಮನವಿ ಮಾಡಿ ಮತ್ತೊಂದು ಸಂದೇಶವನ್ನು ಬಿಜೆಪಿ ಪ್ರಕಟಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.