ADVERTISEMENT

ಹಿಜಾಬ್-ಕೇಸರಿ ಶಾಲು ವಿವಾದ; ಪೊಲೀಸರಿಂದ ಪಥಸಂಚಲನ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2022, 6:04 IST
Last Updated 11 ಫೆಬ್ರುವರಿ 2022, 6:04 IST
   

ಹೊಸಪೇಟೆ (ವಿಜಯನಗರ): ಹಿಜಾಬ್-ಕೇಸರಿ ವಿವಾದದ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಧೈರ್ಯ ಮೂಡಿಸಲು ಪೊಲೀಸರು ನಗರ ಸೇರಿದಂತೆ ಜಿಲ್ಲೆಯ ಎಲ್ಲ ತಾಲ್ಲೂಕು, ಹೋಬಳಿಗಳಲ್ಲಿ ಶುಕ್ರವಾರ ಪಥ ಸಂಚಲನ ನಡೆಸಿದರು.

ನಗರದಲ್ಲಿ ಡಿವೈಎಸ್ಪಿ ವಿಶ್ವನಾಥರಾವ್ ಕುಲಕರ್ಣಿ ನೇತೃತ್ವದಲ್ಲಿ ಪೊಲೀಸರು ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಪಥಸಂಚಲನ ನಡೆಸಿದರು.

ಜಿಲ್ಲೆಯ ಹರಪನಹಳ್ಳಿ, ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಕೂಡ್ಲಿಗಿ, ಕಾನಹೊಸಹಳ್ಳಿ, ಮರಿಯಮ್ಮನಹಳ್ಳಿ, ಕಮಲಾಪುರದಲ್ಲಿ ಮಾರ್ಚ್ ನಡೆಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.