ADVERTISEMENT

ಹಿರಿಯೂರು ಬಳಿ ಬಸ್‌ಗೆ ಬೆಂಕಿ: ಮೂವರು ಮಕ್ಕಳು, ಇಬ್ಬರು ಮಹಿಳೆಯರ ಗುರುತು ಪತ್ತೆ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2020, 5:07 IST
Last Updated 12 ಆಗಸ್ಟ್ 2020, 5:07 IST
ಹಿರಿಯೂರು ಬಳಿ ಸುಟ್ಟು ಕರಕಲಾಗಿರುವ ಬಸ್‌
ಹಿರಿಯೂರು ಬಳಿ ಸುಟ್ಟು ಕರಕಲಾಗಿರುವ ಬಸ್‌   

ವಿಜಯಪುರ: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನಲ್ಲಿ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ಬೆಂಕಿ ಹೊತ್ತಿ ಉರಿದ ಬಸ್‌ನಲ್ಲಿ ವಿಜಯಪುರದ ಮೂವರು ಮಕ್ಕಳು ಮತ್ತು ಇಬ್ಬರು ಮಹಿಳೆಯರು ಸೇರಿದಂತೆ ಐವರು ಸಾವಿಗೀಡಾಗಿರುವುದಾಗಿ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಶೀಲಾ ರವಿ(33), ಸ್ಪರ್ಷಾ(8), ಸಮೃದ್ಧ (5), ಕವಿತಾ ವಿನಾಯಕ (29) ಮತ್ತು ನಿಶ್ಚಿತಾ(3) ಬೆಂಕಿಗೆ ಆಹುತಿಯಾಗಿದ್ದಾರೆ ಎಂದು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ತಿಳಿಸಿದ್ದಾರೆ.

ನಿನ್ನೆ ರಾತ್ರಿ 9 ಗಂಟೆಗೆ ಕುಕ್ಕೆ ಶ್ರೀ ಬಸ್ ವಿಜಯಪುರದಿಂದ ಹೊರಟಿತ್ತು. 29 ಪ್ರಯಾಣಿಕರು, ಇಬ್ಬರು ಚಾಲಕರು ಇದ್ದರು ಎಂದು ಟೆಕೆಟ್ ಬುಕ್ಕಿಂಗ್ ಏಜನ್ಸಿಯವರು ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.