ADVERTISEMENT

ಮೀಸಲಾತಿ ಹೋರಾಟ: ‘ಸಿದ್ದರಾಮಯ್ಯ ಜತೆ ಮಾತನಾಡಿ ವ್ಯತ್ಯಾಸ ಸರಿಪಡಿಸುತ್ತೇವೆ’

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2020, 18:41 IST
Last Updated 26 ಡಿಸೆಂಬರ್ 2020, 18:41 IST
ಎಚ್.ಎಂ. ರೇವಣ್ಣ
ಎಚ್.ಎಂ. ರೇವಣ್ಣ   

ದಾವಣಗೆರೆ: ‘ಸಿದ್ದರಾಮಯ್ಯ ಅವರ ಜತೆಗೆ ಮಾತನಾಡುತ್ತೇವೆ. ವ್ಯತ್ಯಾಸಗಳಾಗಿದ್ದಲ್ಲಿ ಸರಿಪಡಿಸಿಕೊಳ್ಳುತ್ತೇವೆ. ಕುರುಬ ಸಮಾಜಕ್ಕೆ ಎಸ್‌ಟಿ ಮೀಸಲಾತಿ ಸಿಗಬೇಕು ಎಂಬುದಕ್ಕೆ ಅವರ ವಿರೋಧವಿಲ್ಲ’ ಎಂದು ಮಾಜಿ ಸಚಿವ ಎಚ್‌.ಎಂ. ರೇವಣ್ಣ ಹೇಳಿದರು.

ನಗರದಲ್ಲಿ ಶನಿವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆರ್‌ಎಸ್‌ಎಸ್‌ಗೂ ಇದಕ್ಕೂ ಸಂಬಂಧವಿಲ್ಲ. ಎಸ್‌ಟಿ ಹೋರಾಟದ ಹಿಂದೆ ಆರ್‌ಎಸ್‌ಎಸ್‌ ಇದೆ ಎನ್ನುವುದು ಸತ್ಯಕ್ಕೆ ದೂರವಾದುದು. ಅವರಿಗೆ ಎಲ್ಲಿ ಆರ್‌ಎಸ್‌ಎಸ್‌ ಕಂಡಿತೋ ಗೊತ್ತಿಲ್ಲ. ಕುರುಬರಿಗಾಗಿ ಕುರುಬರೇ ನಡೆಸುವ ಹೋರಾಟ ಇದು. ಅವರ ಜತೆ ಮಾತನಾಡುತ್ತೇವೆ. ಅವರು ಹೇಳಿರುವುದರಲ್ಲಿ ನಿಜ ಇದ್ದರೆ ಒಪ್ಪಿಕೊಳ್ಳುತ್ತೇವೆ. ತಪ್ಪು ಮಾಹಿತಿ ಅವರಿಗೆ ಬಂದಿದ್ದರೆ ಸರಿಪಡಿಸುತ್ತೇವೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT