ಬೆಂಗಳೂರು: ‘ಕೊಳೆಗೇರಿ ನಿವಾಸಿಗಳಿಗೆ ಕಟ್ಟಿಸಿಕೊಡುವ ಮನೆಗಳನ್ನು ಪರಭಾರೆ ಮಾಡಬಾರದು ಎಂಬ ಕಾರಣಕ್ಕೆ ಮಹಿಳೆ ಹೆಸರಿನಲ್ಲೇ ಸ್ವತ್ತು ನೋಂದಣಿ ಮಾಡಿಕೊಡಲು ತೀರ್ಮಾನಿಸಲಾಗಿದೆ’ ಎಂದು ವಸತಿ ಸಚಿವ ವಿ.ಸೋಮಣ್ಣ ಮಂಗಳವಾರ ತಿಳಿಸಿದರು.
ವಿಧಾನಸೌಧದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರ ಜತೆ ಮಾತನಾಡಿ, ಮಹಿಳೆಯರ ಹೆಸರಿಗೆ ಸ್ವತ್ತು ನೋಂದಣಿ ಮಾಡಿಸಿದರೆ ಪರಭಾರೆ ಮಾಡುವುದಿಲ್ಲ ಎಂಬ ವಿಶ್ವಾಸವಿದೆ ಎಂದು ಅವರು ಹೇಳಿದರು.
ಕೊಳೆಗೇರಿ ವಾಸಿಗಳು ತಮ್ಮ ಮನೆ ಬಾಡಿಗೆಗೆ ಕೊಟ್ಟು ಬೇರೆಡೆ ವಾಸಿಸುವುದನ್ನು ತಡೆಯಲು ಅಧಿಕಾರಿಗಳಿಂದ ಪರಿಶೀಲಿಸಲಾಗುವುದು ಎಂದು ತಿಳಿಸಿದರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.