ADVERTISEMENT

ಎಂಟಿಬಿ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ: ಆರಗ ಜ್ಞಾನೇಂದ್ರ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2022, 20:45 IST
Last Updated 29 ಅಕ್ಟೋಬರ್ 2022, 20:45 IST
ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ    

ಬೆಂಗಳೂರು: ‘ಕೆ.ಆರ್‌. ಪುರ ಇನ್‌ಸ್ಪೆಕ್ಟರ್‌ ನಂದೀಶ್ ₹ 70 ಲಕ್ಷ– ₹ 80 ಲಕ್ಷ ಕೊಟ್ಟು ಬಂದಿದ್ದರು ಎಂದು ಸಚಿವ ಎಂಟಿಬಿ ನಾಗರಾಜ್ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಈ ಬಗ್ಗೆ ಅವರಿಂದ ಮಾಹಿತಿ ಪಡೆಯುತ್ತೇನೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

‌ಸುದ್ದಿಗಾರರ ಜೊತೆ ಶನಿವಾರ ಮಾತ ನಾಡಿದ ಅವರು, ‘ಕೆಲವು ಠಾಣೆಗಳ ವ್ಯಾಪ್ತಿಯಲ್ಲಿ ಇತ್ತೀಚೆಗೆ ತಡರಾತ್ರಿವರೆಗೂ ಕ್ಲಬ್‌, ಪಬ್‌ಗಳು ಕಾರ್ಯಾಚರಿಸುತ್ತಿವೆ. ಅದರ ವಿರುದ್ಧ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೆ. ಕೆ.ಆರ್‌. ಪುರ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು. ಹೀಗಾಗಿ, ನಂದೀಶ್ ಅವರನ್ನು ಪೊಲೀಸ್‌ ಕಮಿಷನರ್‌ ಅಮಾನತು ಮಾಡಿದ್ದರು. ಆದರೆ, ನಂದೀಶ್‌ಗೆ ಹೃದಯಾಘಾತ ಆಗಿದೆ. ಇದೊಂದು ದುರದೃಷ್ಟಕರ ಘಟನೆ. ಇದಕ್ಕೆ ಬೇರೆ ಅರ್ಥಕಲ್ಪಿಸುವುದು ಬೇಡ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT