ADVERTISEMENT

ಪ್ರಕರಣ ಇತ್ಯರ್ಥದ ನಂತರ ನಿಲುವು ಪ್ರಕಟ: ಆರಗ

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2022, 22:00 IST
Last Updated 23 ಡಿಸೆಂಬರ್ 2022, 22:00 IST
   

ಬೆಳಗಾವಿ: ‘545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಇನ್ನೂ ಮುಂದು
ವರಿದಿದೆ.ನ್ಯಾಯಾಲಯದಲ್ಲಿ ಪ್ರಕರಣ ಇತ್ಯರ್ಥವಾದ ನಂತರ ಸರ್ಕಾರ ತನ್ನ ನಿಲುವು ಪ್ರಕಟಿಸಲಿದೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

‘ಯಾವುದೇ ಕಾರಣಕ್ಕೂ ಮರುಪರೀಕ್ಷೆ ಮಾಡಬಾರದು. ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಆಯ್ಕೆಯಾದವರಿಗೆ ನೇಮಕಾತಿ ಆದೇಶ ನೀಡಬೇಕು’ ಎಂದು ಒತ್ತಾಯಿಸಿ, ಇಲ್ಲಿನ ಸುವರ್ಣ ಸೌಧದ ಎದುರು ಹಲವು ಅಭ್ಯರ್ಥಿಗಳು ಶುಕ್ರವಾರ ನಡೆಸಿದ ಪ್ರತಿಭಟನಾ ಸ್ಥಳದಲ್ಲಿ ಅವರು ಮಾತನಾಡಿದರು.

‘ಸಿಐಡಿ ತಂಡ ಗುರುವಾರ ಈ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಬಂಧಿಸಿದೆ. ಹೀಗಾಗಿ, ತನಿಖೆ ಪೂರ್ಣವಾಗುವವರೆಗೂ ಕಾಯಬೇಕಾಗುತ್ತದೆ’ ಎಂದರು.

ADVERTISEMENT

ನಮ್ಮ ಭವಿಷ್ಯದ ಕತೆ ಏನು?: ‘ತನಿಖೆ ಅಂತಿಮ ಹಂತಕ್ಕೆ ಬಂದಿದ್ದು, ‍ಅಕ್ರಮಎಸಗಿದವರನ್ನು ಡಿಬಾರ್‌ ಮಾಡಲಾಗುವುದು ಎಂದು ನೇಮಕಾತಿ ವಿಭಾಗದ ಹಿರಿಯ ಅಧಿಕಾರಿ ತಿಳಿಸಿದ್ದಾರೆ. ಆದರೆ,ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಆಯ್ಕೆಯಾದ ನಮ್ಮ ಭವಿಷ್ಯದ ಕತೆ ಏನು? ಯಾರೋ ಮಾಡಿದ ತಪ್ಪಿಗೆ ನಾವೂ ಬೆಲೆ ತೆರಬೇಕೇ? ’ ಎಂದು ಅಭ್ಯರ್ಥಿಗಳು ಪ್ರಶ್ನಿಸಿದರು.

ಅಭ್ಯರ್ಥಿಗಳಾದ ವಿನಾಯಕಬಿ.ಡಿ, ಅಮರನಾಥ, ಸಂತೋಷ ಕಾಂಬಳೆ ಹಲವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.