ADVERTISEMENT

ಹುಬ್ಬಳ್ಳಿ| ಕಲ್ಲು ತೂರಾಟ ನಡೆದಿದ್ದ ದೇವಸ್ಥಾನಕ್ಕೆ ಅರಗ ಜ್ಞಾನೇಂದ್ರ, ಜೋಶಿ ಭೇಟಿ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2022, 14:29 IST
Last Updated 17 ಏಪ್ರಿಲ್ 2022, 14:29 IST
ದೇವಸ್ತಾನದತ್ತ ತೆರಳುತ್ತಿರುವ ಸಚಿವರಾದ ಆರಗ ಜ್ಞಾನೇಂದ್ರ ಮತ್ತು ಜೋಶಿ
ದೇವಸ್ತಾನದತ್ತ ತೆರಳುತ್ತಿರುವ ಸಚಿವರಾದ ಆರಗ ಜ್ಞಾನೇಂದ್ರ ಮತ್ತು ಜೋಶಿ    

ಹುಬ್ಬಳ್ಳಿ: ಗಲಭೆ ಸಂದರ್ಭದಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಹಳೇ ಹುಬ್ಬಳ್ಳಿಯ ದಿಡ್ಡಿ ಓಣಿಯ ಹನುಮಾನ್ ದೇವಸ್ಥಾನಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಭೇಟಿ ನೀಡಿ ಹಾನಿಯನ್ನು ಪರಿಶೀಲಿಸಿದರು.

ಶಾಸಕರಾದ ಜಗದೀಶ ಶೆಟ್ಟರ್, ಶಾಸಕ ಅರವಿಂದ ಬೆಲ್ಲದ ಸೇರಿದಂತೆ ಬಿಜೆಪಿ ಮುಖಂಡರು ಸಾಥ್ ನೀಡಿದರು. ಸ್ಥಳದಲ್ಲಿ 144 ನಿಷೇಧಾಜ್ಞೆ ಜಾರಿಯಲ್ಲಿದ್ದರೂ ನೂರಾರು ಬಿಜೆಪಿ ಕಾರ್ಯಕರ್ತರು, ಸಾರ್ವಜನಿಕರು ಜಮಾಯಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT