ADVERTISEMENT

ಪಕ್ಷದ ವರಿಷ್ಠರ ನಿರ್ಧಾರ ಪಾಲಿಸುವೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರ

​ಪ್ರಜಾವಾಣಿ ವಾರ್ತೆ
Published 24 ಜನವರಿ 2023, 9:28 IST
Last Updated 24 ಜನವರಿ 2023, 9:28 IST
ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ    

ಬೆಂಗಳೂರು: ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರದಲ್ಲಿ ಪಕ್ಷದ ವರಿಷ್ಠರು ನಿರ್ಧಾರವನ್ನು ಪಾಲಿಸುವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, 'ಪಕ್ಷ ಟಿಕೆಟ್ ನೀಡಿದರೆ ಮತ್ತೆ ಚುನಾವಣೆಗೆ ಸ್ಪರ್ಧಿಸುವೆ. ಇಲ್ಲದಿದ್ದರೆ ಸಂಘಟನೆಯ ಕೆಲಸ ಮಾಡುವೆ' ಎಂದರು.

'ಐದು ಬಾರಿ ಚುನಾವಣೆಯಲ್ಲಿ ಸೋತಿದ್ದೇನೆ. ನಾಲ್ಕು ಬಾರಿ ಗೆದ್ದಿದ್ದೇನೆ. ಗೆದ್ದಾಗ ಹಿಗ್ಗಿಲ್ಲ, ಸೋತಾಗ ಕುಗ್ಗಿಲ್ಲ. ಪ್ರಾಮಾಣಿಕವಾಗಿ ಸಂಘಟನೆಯ ಕೆಲಸ‌ ಮಾಡಿಕೊಂಡು ಬಂದಿದ್ದೇನೆ' ಎಂದರು.

ADVERTISEMENT

ಸ್ಯಾಂಟ್ರೊ‌ ರವಿ ಪ್ರಕರಣದಲ್ಲಿ ತಮ್ಮ ಪಾತ್ರ ಏನೂ ಇಲ್ಲ. ಆತನಿಗೂ ತಮಗೂ ಯಾವುದೇ ಸಂಬಂಧವಿಲ್ಲ. ‌ನಿಷ್ಪಕ್ಷಪಾತವಾಗಿ ತನಿಖೆ ನಡೆದು ಎಲ್ಲ ಸತ್ಯ ಹೊರಬರಲಿ ಎಂದು ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.