ADVERTISEMENT

ಅಪಸ್ವರ ಎತ್ತಿರುವವರು ಆತ್ಮಾವಲೋಕನ ಮಾಡಿಕೊಳ್ಳಬೇಕು: ಬಸವರಾಜ ಬೊಮ್ಮಾಯಿ

ನಾಯಕತ್ವ ಬದಲಾವಣೆ ಕುರಿತು ಅಭಿಪ್ರಾಯ

​ಪ್ರಜಾವಾಣಿ ವಾರ್ತೆ
Published 6 ಜೂನ್ 2021, 10:09 IST
Last Updated 6 ಜೂನ್ 2021, 10:09 IST
ಬಸವರಾಜ ಬೊಮ್ಮಾಯಿ, ಪ್ರಜಾವಾಣಿ ಚಿತ್ರ
ಬಸವರಾಜ ಬೊಮ್ಮಾಯಿ, ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ರಾಜ್ಯದಲ್ಲಿನ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಯಡಿಯೂರಪ್ಪ ಅವರಿಗೆ ತುಂಬಾ ಬೇಸರ ಇದ್ದಂತಿದೆ. ಅವರ ಜೊತೆ ಮಾತನಾಡುವಾಗ ನೋವು ಗೊತ್ತಾಯಿತು. ಅವರ ಮಾತುಗಳಲ್ಲಿ ಬೇಸರ ಇತ್ತು’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, ‘ನಮ್ಮ ಮುಖ್ಯಮಂತ್ರಿ ಅಭಿವೃದ್ಧಿ ಕೆಲಸಗಳ ಜೊತೆ ಕೊರೊನಾ ನಿಯಂತ್ರಣಕ್ಕೂ ಕೆಲಸ ಮಾಡುತ್ತಿದ್ದಾರೆ. ಆದರೆ, ನಾಯಕತ್ವ ಬದಲಾವಣೆಯ ಗಾಳಿ ಸುದ್ದಿ ಹಬ್ಬಿಸಲಾಗುತ್ತಿದೆ. ಹೈಕಮಾಂಡ್ ಕೂಡ ಯಡಿಯೂರಪ್ಪ ಸಾಮರ್ಥ್ಯವನ್ನು ಗುರುತಿಸಿದೆ’ ಎಂದರು.

‘ಯಡಿಯೂರಪ್ಪ ಅವರ ನಾಯಕತ್ವದ ವಿಷಯದಲ್ಲಿ ಹೈಕಮಾಂಡ್‌ನಲ್ಲಿಯೂ ಯಾವುದೇ ಗೊಂದಲ ಇಲ್ಲ. ಯಡಿಯೂರಪ್ಪ ನಾಯಕತ್ವದಲ್ಲೇ ನಾವು ಬಂದಿದ್ದೇವೆ. ಅವರ ನಾಯಕತ್ವದಲ್ಲೇ ಮುಂದೆಯೂ ಕೆಲಸ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಕೂಡಾ ಯಡಿಯೂರಪ್ಪ ಅವರದ್ದೇ ಶ್ರೀರಕ್ಷೆ ಇರಲಿದೆ. ಸಣ್ಣಪುಟ್ಟ ವಿಚಾರಗಳಿಗೆ ಸಂಪೂರ್ಣ ವಿರಾಮ ಹಾಕಬೇಕಿದೆ’ ಎಂದರು.

ADVERTISEMENT

‘ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯದಲ್ಲಿ ನಡೆದ ಚುನಾವಣೆಗಳಲ್ಲಿ ಪಕ್ಷಕ್ಕೆ ಸಂಪೂರ್ಣ ಬೆಂಬಲ ಸಿಕ್ಕಿದೆ. ಕೊರೊನಾದ ಸಂಕಷ್ಟದ ಈ ಸಂದರ್ಭದಲ್ಲಿ ಅವರು ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ. ಆದರೆ, ಅಪಸ್ವರ ಎತ್ತಿರುವವರು ಆತ್ಮಾವಲೋಕನ ಮಾಡಿಕೊಳ್ಳಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.