ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಸೇರಿದಂತೆ ಮೂವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ನೀಡಲು ನಿರ್ಧರಿಸಿದೆ.
ಖಾದರ್ ಅವರ ಜೊತೆಗೆ ವಿಧಾನ ಪರಿಷತ್ ಮಾಜಿ ಸದಸ್ಯ ಡಿ. ಮಾದೇಗೌಡ ಮತ್ತು ಜೆ.ಪಿ.ಅಗ್ರಿ ಜೆನೆಟಿಕ್ಸ್ ಸಂಸ್ಥಾಪಕ ಟಿ.ಬಿ. ಪ್ರಸನ್ನ ಗೌರವ ಡಾಕ್ಟರೇಟ್ಗೆ ಭಾಜನರಾಗಲಿದ್ದಾರೆ.
ಇದೇ 8ರಂದು ನಡೆಯಲಿರುವ ವಿಶ್ವವಿದ್ಯಾನಿಲಯದ 60ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪ್ರದಾನ ಮಾಡಲಾಗುತ್ತದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಎಸ್.ಎಂ. ಜಯಕರ್ ಮಾಹಿತಿ ನೀಡಿದ್ದಾರೆ.
ಹೈದರಾಬಾದ್ನ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಪ್ರಯೋಗಾಲಯದ (ಡಿಆರ್ಡಿಎಲ್) ಮಾಜಿ ನಿರ್ದೇಶಕ ಪ್ರಹ್ಲಾದ್ ರಾಮರಾವ್ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ರಾಜ್ಯಪಾಲ ಥಾವರಚಂದ್ ಗೆಹಲೋತ್, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಭಾಗವಹಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.